Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:11 - ಕನ್ನಡ ಸಮಕಾಲಿಕ ಅನುವಾದ

11 ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:11
20 ತಿಳಿವುಗಳ ಹೋಲಿಕೆ  

ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.


“ಬಲಿಪೀಠದ ಮೇಲೆ ನೀನು ಅರ್ಪಿಸಬೇಕಾದದ್ದು ಇದೇ: ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಟ್ಟುಬಿಡದೆ ದಹನಬಲಿಯಾಗಿ ಅರ್ಪಿಸಬೇಕು.


ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು.


ಇದು ನನಗೆ ನಂಬಿಗಸ್ತರಾಗಿ ನಡೆದುಕೊಂಡ ಚಾದೋಕನ ಪುತ್ರರಲ್ಲಿ ಪ್ರತಿಷ್ಠಿತರಾಗಿರುವ ಯಾಜಕರದಾಗಿರಬೇಕು; ಇಸ್ರಾಯೇಲರು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ಚಾದೋಕಿನವರು ತಪ್ಪಿಹೋಗಲಿಲ್ಲ.


“ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ, ಬದಲಿಗೆ ಅನ್ಯದೇಶೀಯರನ್ನು ನನ್ನ ಪರಿಶುದ್ಧ ಸ್ಥಳದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿದಿರಿ.


ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.


ಕೋರಹನೂ, ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು,


ಮೇಘವು ದೇವದರ್ಶನದ ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ, ಇಸ್ರಾಯೇಲರು ಯೆಹೋವ ದೇವರ ಅಪ್ಪಣೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.


ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ನನ್ನ ವಿಧಿಯನ್ನೂ, ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ನನ್ನ ನೇಮಗಳನ್ನೂ, ಕೈಗೊಂಡು ನಡೆದನು,” ಎಂದರು.


“ನಮಗಾದರೋ ಯೆಹೋವ ದೇವರು ದೇವರಾಗಿದ್ದಾರೆ. ನಾವು ಅವರನ್ನು ಬಿಡಲಿಲ್ಲ. ಇದಲ್ಲದೆ ಯೆಹೋವ ದೇವರಿಗೆ ಸೇವೆ ಮಾಡುವ ಯಾಜಕರು ಆರೋನನ ಮಕ್ಕಳು. ಲೇವಿಯರು ಅವರಿಗೆ ಕೆಲಸದಲ್ಲಿ ಸಹಾಯ ಮಾಡುತ್ತಿದ್ದರು.


ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”


ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು.


ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಶುದ್ಧ ಬಂಗಾರದ ದೀಪಸ್ತಂಭಗಳನ್ನೂ ಅವುಗಳ ದೀಪಗಳನ್ನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು