Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:19 - ಕನ್ನಡ ಸಮಕಾಲಿಕ ಅನುವಾದ

19 ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ, ಅವುಗಳ ಗ್ರಾಮಗಳನ್ನೂ ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಬೀಯನ ಸೈನಿಕರು ಯಾರೊಬ್ಬಾಮನ ಸೈನಿಕರನ್ನು ಓಡಿಸಿದರು. ಮತ್ತು ಅವರ ಪಟ್ಟಣಗಳಾದ ಬೇತೇಲ್, ಯೆಷಾನಾ ಮತ್ತು ಎಪ್ರೋನ್‌ಗಳನ್ನು ವಶಪಡಿಸಿಕೊಂಡರು. ಈ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿದ್ದ ಹಳ್ಳಿಗಳನ್ನೂ ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:19
11 ತಿಳಿವುಗಳ ಹೋಲಿಕೆ  

ಆಸನು ಆ ಮಾತುಗಳನ್ನೂ, ಪ್ರವಾದಿಯಾದ ಓದೇದನ ಮಗ ಅಜರ್ಯನ ಪ್ರವಾದನಾ ಮಾತುಗಳನ್ನೂ ಕೇಳಿದಾಗ, ಅವನು ಬಲಗೊಂಡು ಯೆಹೂದ ಬೆನ್ಯಾಮೀನಿನ ಸಮಸ್ತ ದೇಶದೊಳಗಿಂದಲೂ, ಎಫ್ರಾಯೀಮನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯೆಹೋವ ದೇವರ ದ್ವಾರಾಂಗಳದ ಮುಂದೆ ಇದ್ದ ಯೆಹೋವ ದೇವರ ಬಲಿಪೀಠವನ್ನು ನೂತನಪಡಿಸಿದನು.


ಆ ಬೆಟ್ಟದ ಶಿಖರದಿಂದ ನೆಫ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣಗಳಿಗೂ ಅಲ್ಲಿಂದ ಕಿರ್ಯತ್ ಯಾರೀಮ್ ಆದ ಬಾಲಾ ಎಂಬ ಊರಿನವರೆಗೆ ಹೋಗುತ್ತದೆ.


ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು.


ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ, ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ, ಅವುಗಳ ಸಮಸ್ತ ಅರಸರನ್ನೂ ಹಿಡಿದು ಖಡ್ಗದಿಂದ ದಾಳಿಮಾಡಿ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.


ದೆಬೀರನ್ನೂ ಅದರ ಅರಸನನ್ನೂ, ಅದರ ಸಮಸ್ತ ಊರುಗಳನ್ನೂ ಹಿಡಿದು ಅವುಗಳನ್ನು ಖಡ್ಗದಿಂದ ದಾಳಿಮಾಡಿ, ಒಬ್ಬರನ್ನೂ ಉಳಿಸದೆ ಅದರಲ್ಲಿದ್ದ ಎಲ್ಲರನ್ನೂ, ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.


ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ದಾಳಿಮಾಡಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ. ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದನು.


ಹೀಗೆ ಆ ಕಾಲದಲ್ಲಿ ಇಸ್ರಾಯೇಲರು ತಗ್ಗಿಹೋದರು. ಆದರೆ ಯೆಹೂದದವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಮೇಲೆ ಆತುಕೊಂಡದ್ದರಿಂದ ಜಯ ಹೊಂದಿದರು.


ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲಿಲ್ಲ. ಯೆಹೋವ ದೇವರ ಶಿಕ್ಷೆಯಿಂದ ಯಾರೊಬ್ಬಾಮನು ಸತ್ತನು.


ಇದಲ್ಲದೆ ಅವನು ಆ ಸ್ಥಳಕ್ಕೆ, ಬೇತೇಲ್, ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಸ್ಥಳಕ್ಕೆ, ಲೂಜ್ ಎಂದು ಹೆಸರಿತ್ತು.


ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು, ಯೆಹೂದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದುಕೊಂಡ ಎಫ್ರಾಯೀಮನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು