Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋವ ದೇವರು ಕೂಷ್ಯರನ್ನು ಆಸನ ಮುಂದೆಯೂ, ಯೆಹೂದದವರ ಮುಂದೆಯೂ ಸೋಲುವಂತೆ ಮಾಡಿದರು. ಆದ್ದರಿಂದ ಕೂಷ್ಯರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಅರಸನಿಂದಲೂ ಯೆಹೂದ್ಯರಿಂದಲೂ ಸುಡಾನರಿಗೆ ಅಪಜಯ ಉಂಟಾಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೆಹೂದ ದೇಶದ ಆಸನ ಸೈನ್ಯವು ಇಥಿಯೋಪಿಯಾದ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:12
17 ತಿಳಿವುಗಳ ಹೋಲಿಕೆ  

ಆಗ ಯೆಹೂದ್ಯರು ಆರ್ಭಟಿಸಿದರು. ಯೆಹೂದ್ಯರು ಆರ್ಭಟಿಸಿದಾಗ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮನನ್ನೂ, ಸಮಸ್ತ ಇಸ್ರಾಯೇಲರನ್ನೂ ಅಪಜಯಗೊಳಿಸಿದರು.


ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.


ಗೊತ್ತುಗುರಿ ಇಲ್ಲದವನ ಹಾಗೆ ನಾನು ಓಡುವುದಿಲ್ಲ, ಗಾಳಿಯನ್ನು ಗುದ್ದುವವನ ಹಾಗೆ ನಾನು ಹೋರಾಡುವುದಿಲ್ಲ.


ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು.


ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ನಿಮಗೆ ವಿರೋಧವಾಗಿ ಏಳುವ ನಿಮ್ಮ ಶತ್ರುಗಳನ್ನು ಯೆಹೋವ ದೇವರು ನಿಮ್ಮ ಮುಂದೆಯೇ ಸೋಲಿಸಿಬಿಡುವರು. ಅವರು ಒಂದೇ ಮಾರ್ಗದಲ್ಲಿ ನಿಮಗೆ ವಿರೋಧವಾಗಿ ಹೊರಟು ಬಂದರೂ, ಏಳು ಮಾರ್ಗಗಳಿಂದ ಓಡಿಹೋಗುವರು.


ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.


ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.


ಅವನ ಸಂಗಡ ಸಾವಿರದ ಇನ್ನೂರು ರಥಗಳೂ, ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಈಜಿಪ್ಟಿನಿಂದ ಬಂದ ಲಿಬಿಯದವರೂ, ಸುಕ್ಕೀಯರೂ, ಕೂಷ್ಯರೂ ಲೆಕ್ಕವಿಲ್ಲದಷ್ಟು ಬಂದರು.


“ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.


ನಾನೂರ ಮೂವತ್ತು ವರ್ಷಗಳು ತೀರಿದ ತರುವಾಯ, ಅದೇ ದಿನದಲ್ಲಿ ಯೆಹೋವ ದೇವರ ಸೈನ್ಯಗಳೆಲ್ಲಾ ಈಜಿಪ್ಟ್ ದೇಶವನ್ನು ಬಿಟ್ಟು ಹೊರಗೆ ಹೋದವು.


ಅದೇ ದಿನದಲ್ಲಿ ಯೆಹೋವ ದೇವರು ಇಸ್ರಾಯೇಲರನ್ನು ಅವರ ಸೈನ್ಯಗಳ ಪ್ರಕಾರ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದರು.


ಅವರು ವೈರಿಗಳಿಂದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಐವತ್ತು ಸಾವಿರ ಒಂಟೆಗಳನ್ನು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳನ್ನು, ಎರಡು ಸಾವಿರ ಕತ್ತೆಗಳನ್ನು ಅಲ್ಲದೆ, ಒಂದು ಲಕ್ಷ ಜನರನ್ನು ಯುದ್ಧ ಕೈದಿಗಳನ್ನಾಗಿ ಸೆರೆಹಿಡಿದರು.


ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯೆಹೋವ ದೇವರಿಗೆ ಬಲಿ ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು