Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಆಸನೂ, ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನವರೆಗೂ ಹಿಂದಟ್ಟಿದರು. ಹೆಚ್ಚಿನ ಸಂಖ್ಯೆಯಲ್ಲಿ ಕೂಷ್ಯರು ಸೋತುಹೋದರು. ಅವರು ಯೆಹೋವ ದೇವರ ಮುಂದೆಯೂ, ಅವರ ಸೈನ್ಯದ ಮುಂದೆಯೂ ನಾಶವಾದರು. ಯೆಹೂದ್ಯರು ಬಹು ಕೊಳ್ಳೆಯನ್ನು ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೂಷ್ಯರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ನುಚ್ಚು ನೂರಾಗಿ ಹೋದರು. ಇಸ್ರಾಯೇಲರಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು. ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಸರ್ವೇಶ್ವರನ ಮತ್ತು ಅವರ ಸೈನ್ಯದ ಮುಂದೆ ಸುಡಾನರು ಭಿನ್ನಭಿನ್ನರಾದರು. ಇಸ್ರಯೇಲರಿಗೆ ಅಪರಿಮಿತವಾದ ಕೊಳ್ಳೆಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೂಷ್ಯರು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ಚೂರು ಚೂರಾದರು. ಇಸ್ರಾಯೇಲ್ಯರಿಗೆ ಅಪರಿವಿುತವಾದ ಕೊಳ್ಳೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಸನ ಸೈನಿಕರು ಇಥಿಯೋಪಿಯಾದ ಸೈನ್ಯವನ್ನು ಗೆರಾರಿನ ತನಕ ಹಿಂದಟ್ಟಿಕೊಂಡು ಹೋದರು. ಅವರು ಮತ್ತೆ ಸೈನ್ಯವನ್ನು ಕಟ್ಟಿ ಯುದ್ಧಮಾಡಲು ಸಾಧ್ಯವಾಗದಷ್ಟು ಸೈನಿಕರು ಸತ್ತರು. ಅವರ ಬಲವನ್ನು ಮುರಿಯಲು ಯೆಹೋವನು ತನ್ನ ಸೈನ್ಯವನ್ನು ಬಳಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:13
17 ತಿಳಿವುಗಳ ಹೋಲಿಕೆ  

ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.


ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ, ದೇಶದಲ್ಲಿ ಮತ್ತೊಂದು ಬರವು ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.


ಅಬ್ರಹಾಮನು ಅಲ್ಲಿಂದ ನೆಗೆವ ಕಡೆಗೆ ಕಾದೇಶಿಗೆ ಪ್ರಯಾಣಮಾಡಿ, ಕಾದೇಶ್ ಹಾಗೂ ಶೂರಿನ ಮಧ್ಯದ ಗೆರಾರಿನಲ್ಲಿ ಸ್ವಲ್ಪಕಾಲ ಪ್ರವಾಸಿಯಾಗಿದ್ದನು.


ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.


ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.


ದೇವರೇ, ಈಗ ನೀವು ನಮ್ಮ ಸೈನ್ಯಗಳ ಸಂಗಡ ಹೊರಡುವುದಿಲ್ಲವೋ ನಮ್ಮನ್ನು ಕೈಬಿಟ್ಟಿದ್ದೀರೋ?


ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?


ನನ್ನನ್ನು ಜಜ್ಜುವುದು ದೇವರಿಗೆ ಮೆಚ್ಚಿಗೆಯಾದರೆ, ದೇವರು ತಮ್ಮ ಕೈಚಾಚಿ ನನ್ನ ಪ್ರಾಣವನ್ನು ತೆಗೆದುಕೊಳ್ಳಲಿ.


ಅದೇ ಕಾಲದಲ್ಲಿ ದಿನೇ ದಿನೇ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವವರೆಗೆ, ದಾವೀದನಿಗೆ ಸಹಾಯ ಕೊಡುವುದಕ್ಕೆ ಅವನ ಕಡೆಗೆ ಬರುತ್ತಿದ್ದರು.


“ನೀನು ದಯಮಾಡಿ ನಿನ್ನ ದಾಸಿಯ ತಪ್ಪನ್ನು ಮನ್ನಿಸಬೇಕು. ಏಕೆಂದರೆ ನನ್ನ ಒಡೆಯನು ಯೆಹೋವ ದೇವರ ಯುದ್ಧಗಳನ್ನು ನಡೆಸುತ್ತಾನೆ. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನ ಕಾಣದಿರಲಿ. ಯೆಹೋವ ದೇವರು ನಿಶ್ಚಯವಾಗಿ ನನ್ನ ಒಡೆಯನಾದ ನಿನಗೆ ಶಾಶ್ವತ ರಾಜ್ಯವನ್ನು ಸ್ಥಿರಪಡಿಸುವರು.


ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು.


ನೋಹನ ಪುತ್ರರಾದ ಶೇಮ್, ಹಾಮ್, ಯೆಫೆತರಿಗೆ ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು. ಅವರ ವಂಶಾವಳಿ ಇದು:


ಅವನ ಸಂಗಡ ಸಾವಿರದ ಇನ್ನೂರು ರಥಗಳೂ, ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಈಜಿಪ್ಟಿನಿಂದ ಬಂದ ಲಿಬಿಯದವರೂ, ಸುಕ್ಕೀಯರೂ, ಕೂಷ್ಯರೂ ಲೆಕ್ಕವಿಲ್ಲದಷ್ಟು ಬಂದರು.


ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯೆಹೋವ ದೇವರಿಗೆ ಬಲಿ ಅರ್ಪಿಸಿದರು.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ಯೆಹೋವ ದೇವರ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದುದರಿಂದ, ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡಲಿಲ್ಲ.


ಯೆಹೋವ ದೇವರು ಇಸ್ರಾಯೇಲರ ಶತ್ರುಗಳ ಮೇಲೆ ಯುದ್ಧ ಮಾಡಿದರೆಂದು ಜನರು ಕೇಳಿದಾಗ, ದೇವರ ಭಯವು ಆ ದೇಶದಲ್ಲಿ ಸಕಲ ರಾಜ್ಯಗಳ ಮೇಲೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು