Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:2 - ಕನ್ನಡ ಸಮಕಾಲಿಕ ಅನುವಾದ

2 ಆಸನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಸನು ತನ್ನ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:2
15 ತಿಳಿವುಗಳ ಹೋಲಿಕೆ  

ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.


ಆಸನು ತನ್ನ ತಂದೆಯಾದ ದಾವೀದನ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿದನು.


ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ದೇವರ ಮುಂದೆ ಪವಿತ್ರತೆಯಿಂದಲೂ ನೀತಿಯಿಂದಲೂ ಅವರನ್ನೇ ಸೇವಿಸುವವರಾಗುವಂತೆಯೂ ಈ ಪ್ರಕಾರ ಮಾಡಿದ್ದಾರೆ.


ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಉತ್ತಮವಾದದ್ದನ್ನೂ, ಸರಿಯಾದದ್ದನ್ನೂ, ಸತ್ಯವಾದದ್ದನ್ನೂ ನಡೆಸಿದನು.


ಅವನು ಪೂಜಾ ಸ್ಥಳದ ಪುರುಷಗಾಮಿಗಳನ್ನು ದೇಶದಲ್ಲಿಂದ ಹೊರಡಿಸಿ, ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.


ಅಬೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು, ಅವನ ದಿವಸಗಳಲ್ಲಿ ಹತ್ತು ವರ್ಷ ದೇಶವು ಶಾಂತವಾಗಿತ್ತು.


ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.


ಅರಸನಾದ ಆಸನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಇದಲ್ಲದೆ ಆಸನು ಆ ಮೂರ್ತಿಯನ್ನು ಕಡಿದು ಚೂರುಚೂರು ಮಾಡಿ, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.


ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ,


ಅವರ ದೇವರುಗಳಿಗೆ ನೀವು ಅಡ್ಡಬೀಳಲೂಬಾರದು, ಅವುಗಳನ್ನು ಆರಾಧಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ, ಅವರನ್ನು ನಿರ್ಮೂಲ ಮಾಡಿಬಿಟ್ಟು, ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದುಹಾಕಬೇಕು.


ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ, ಅವರ ಕಲ್ಲುಸ್ತಂಭಗಳನ್ನು ಒಡೆದು, ಅವರ ಆಶೇರ್ ಸ್ತಂಭಗಳನ್ನು ಬೆಂಕಿಯಿಂದ ಸುಟ್ಟು, ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ, ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ತೆಗೆದುಹಾಕಬೇಕು.


ಅವನ ಹೃದಯವು ಯೆಹೋವ ದೇವರ ಮಾರ್ಗಗಳಲ್ಲಿ ಸಮರ್ಪಿತವಾಗಿತ್ತು. ಇದಲ್ಲದೆ ಅವನು ಯೆಹೂದದಲ್ಲಿದ್ದ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದುಹಾಕಿದನು.


ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.


ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.


ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು