Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:1 - ಕನ್ನಡ ಸಮಕಾಲಿಕ ಅನುವಾದ

1 ಆಗ ದೇವರ ಆತ್ಮವು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಓದೇದನ ಮಗ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಓಬೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-2 ಓಬೇದನ ಮಗನಾದ ಅಜರ್ಯನ ಮೇಲೆ ದೇವರಾತ್ಮವು ಬಂದಿತು. ಅಜರ್ಯನು ಆಸನನ್ನು ಸಂಧಿಸಿ ಹೀಗೆ ಹೇಳಿದನು: “ಆಸನೇ, ನನ್ನ ಮಾತನ್ನು ಕೇಳು. ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವನೊಡನೆ ಇದ್ದರೆ ಆತನು ನಿಮ್ಮ ಸಂಗಡ ಇರುವನು. ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಆದರೆ ನೀವು ಆತನನ್ನು ತೊರೆದರೆ ಆತನು ನಿಮ್ಮನ್ನೂ ತೊರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:1
8 ತಿಳಿವುಗಳ ಹೋಲಿಕೆ  

ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.


ಬಿಳಾಮನು ತನ್ನ ಕಣ್ಣೆತ್ತಿ ಇಸ್ರಾಯೇಲರು ಅವರವರ ಗೋತ್ರಗಳ ಪ್ರಕಾರ ತಮ್ಮ ಡೇರೆಗಳಲ್ಲಿ ವಾಸವಾಗಿರುವುದನ್ನು ನೋಡಿದಾಗ, ದೇವರಾತ್ಮ ಪ್ರೇರಿತನಾಗಿ


ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


“ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.


ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್. ಮತ್ತೊಬ್ಬನ ಹೆಸರು ಮೇದಾದ್. ಇವರು ನಾಯಕರ ಪಟ್ಟಿಯಲ್ಲಿದ್ದವರಾಗಿದ್ದರು. ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಗುಡಾರಕ್ಕೆ ಹೊರಟು ಹೋಗದೆ, ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.


ಪಶುಗಳಿದ್ದ ಡೇರೆಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂಸಲೇಮಿಗೆ ತಿರುಗಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು