Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:12 - ಕನ್ನಡ ಸಮಕಾಲಿಕ ಅನುವಾದ

12 ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ, ಅವರು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಭಕ್ತರಾಗಿರುವೆವೆಂದು ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಅವರು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪಿತೃಗಳ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಮ್ಮ ಪೂರ್ವಿಕರು ಸೇವೆಮಾಡಿದ ದೇವರೊಂದಿಗೆ ಅಲ್ಲಿ ಅವರು ಒಡಂಬಡಿಕೆ ಮಾಡಿಕೊಂಡು ತಾವು ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಆತನ ಸೇವೆ ಮಾಡುವುದಾಗಿ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:12
22 ತಿಳಿವುಗಳ ಹೋಲಿಕೆ  

ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.


ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.


ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ.


ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು.


ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.


ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;


“ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.


ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿ ಅವರನ್ನು ಹುಡುಕಿದಾಗ ಅವರಿಗೆ ದೇವರು ಸಿಕ್ಕಿದರು.


ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.


ಅವರನ್ನು ಸೆರೆಹಿಡಿದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಅವರು ನಿಮಗೆ ಪ್ರಾರ್ಥನೆಮಾಡಿದರೆ,


ನಿಮ್ಮ ದೇವರಾದ ಯೆಹೋವ ದೇವರು ಈ ಹೊತ್ತು ನಿಮ್ಮ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯನ್ನು ಸೇರುವುದಕ್ಕೆ ಅವರು ಆಣೆಯಿಟ್ಟು ಮುದ್ರಿಸಿದ್ದಾರೆ.


ಯೆಹೋವ ದೇವರು ಹೋರೇಬಿನಲ್ಲಿ ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ದೇಶದಲ್ಲಿ ಇಸ್ರಾಯೇಲರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ:


ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ.


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನಿಮ್ಮ ಮಕ್ಕಳೂ ಹೆಂಡತಿಯರೂ ನಿಮ್ಮ ಪಾಳೆಯದಲ್ಲಿರುವ ಪರದೇಶಿಯರೂ ನಿಮಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವವರೂ ಸಹ


ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.


ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.


ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು