Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:2 - ಕನ್ನಡ ಸಮಕಾಲಿಕ ಅನುವಾದ

2 ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:2
56 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿ ಅವರನ್ನು ಹುಡುಕಿದಾಗ ಅವರಿಗೆ ದೇವರು ಸಿಕ್ಕಿದರು.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಆದರೆ, “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಹಿಂಜರಿದರೆ, ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”


ಯೆಹೂದದವರೆಲ್ಲರು ಪ್ರಮಾಣಕ್ಕೆ ಸಂತೋಷಪಟ್ಟರು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಆಣೆ ಇಟ್ಟು, ತಮ್ಮ ಪೂರ್ಣ ಇಷ್ಟಪೂರ್ವಕವಾಗಿ ದೇವರನ್ನು ಹುಡುಕಿದರು; ದೇವರು ಅವರಿಗೆ ಸಿಕ್ಕಿದರು. ಯೆಹೋವ ದೇವರು ಅವರಿಗೆ ಸುತ್ತಲೂ ವಿಶ್ರಾಂತಿಕೊಟ್ಟರು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


ಆಗ ಯಹಜೀಯೇಲನು, “ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ.


ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ.


ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.


ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವುದನ್ನು ಬಿಟ್ಟುಬಿಟ್ಟು, ಅವರನ್ನು ಅವರ ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ, ಸೂರೆಯೂ ಆಗಿ ಹೋಗುವರು.


ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.”


ಆಗ ಅಬೀಯನು ಎಫ್ರಾಯೀಮ್ ಬೆಟ್ಟದಲ್ಲಿರುವ ಚೆಮಾರಯಿಮ್ ಎಂಬ ಬೆಟ್ಟದ ಮೇಲೆ ನಿಂತು, “ಯಾರೊಬ್ಬಾಮನೇ, ಸಮಸ್ತ ಇಸ್ರಾಯೇಲರೇ, ನನ್ನ ಮಾತು ಕೇಳಿರಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.”


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ಯೋತಾಮನಿಗೆ ಇದನ್ನು ತಿಳಿಸಿದಾಗ, ಅವನು ಹೋಗಿ ಗೆರಿಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು, ತನ್ನ ಸ್ವರವನ್ನೆತ್ತಿ ಕೂಗಿ ಅವರಿಗೆ, “ಶೆಕೆಮಿನ ಹಿರಿಯರೇ, ದೇವರು ನಿಮ್ಮನ್ನು ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.


ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು.


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ಯಾಜಕನಾಗಿರುವ ಎಲಿಯಾಜರನ ಪುತ್ರ ಫೀನೆಹಾಸನು ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರಿಗೆ, “ನೀವು ಯೆಹೋವ ದೇವರಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಅವರು ನಮ್ಮ ಮಧ್ಯದಲ್ಲಿರುತ್ತಾರೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವ ದೇವರ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ,” ಎಂದನು.


ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.


ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆ, “ನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಕೊಟ್ಟುಬಿಟ್ಟೆನೆಂದು ಯೆಹೋವ ದೇವರು ನಿಮಗೆ ಹೇಳುತ್ತಾರೆ,” ಎಂದನು.


ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.


ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.


“ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು.


ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು, ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.


ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ದೇವರು ಸ್ವರ್ಗದಿಂದ ಮನುಷ್ಯರ ಮೇಲೆ ದೃಷ್ಟಿಸಿದರು.


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


ಯೆಹೋವ ದೇವರು ನಿಮ್ಮ ಸಂಗಡ ಇಲ್ಲ ಅದಕ್ಕಾಗಿ ನಿಮ್ಮ ಶತ್ರುಗಳು ನಿಮ್ಮನ್ನು ಪರಾಜಯಗೊಳಿಸದಂತೆ ಏರಿ ಹೋಗಬೇಡಿರಿ.


ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು.


ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ.


ನೀವು ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿದರೆ, ಅವರು ನಿಮಗೆ ಒಳ್ಳೆಯದನ್ನು ಮಾಡದೆ ಕೇಡನ್ನು ಬರಮಾಡಿ ನಿಮ್ಮನ್ನು ದಹಿಸಿಬಿಡುವರು,” ಎಂದು ಹೇಳಿದನು.


ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸುತ್ತಾ ಬಂದಿರಿ; ಆದ್ದರಿಂದ ಇನ್ನು ನಾನು ನಿಮ್ಮನ್ನು ರಕ್ಷಿಸುವುದಿಲ್ಲ.


ನೀವು ಯೆಹೋವ ದೇವರ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಯೆಹೋವ ದೇವರಿಗೆ ಭಯಪಟ್ಟು ಅವರನ್ನು ಸೇವಿಸಿ, ಅವರ ಮಾತಿಗೆ ವಿಧೇಯರಾದರೆ ನೀವೂ, ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಯೆಹೋವ ದೇವರನ್ನು ತಪ್ಪದೆ ಹಿಂಬಾಲಿಸುವಿರಿ.


ನೀವು ಯೆಹೋವ ದೇವರ ಮಾತಿಗೆ ವಿಧೇಯರಾಗದಿದ್ದರೆ, ಯೆಹೋವ ದೇವರ ಆಜ್ಞೆಗೆ ವಿರೋಧವಾಗಿ ತಿರುಗಿಬಿದ್ದರೆ, ಯೆಹೋವ ದೇವರ ಹಸ್ತವು ನಿಮ್ಮ ಪಿತೃಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿರುವುದು.


ಹದದನು ಮಾಡಿದ ಕೇಡಿಗೆ ಹೊರತಾಗಿ ಇವನು ಸೊಲೊಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲಿಗೆ ಶತ್ರುವಾಗಿದ್ದನು. ಅವನು ಇಸ್ರಾಯೇಲನ್ನು ಹಗೆಮಾಡಿ, ಅರಾಮ್ ದೇಶವನ್ನು ಆಳುತ್ತಾ ಇದ್ದನು.


ಪ್ರತಿ ಪಟ್ಟಣದಲ್ಲಿ ಖೇಡ್ಯಗಳನ್ನೂ, ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾಮೀನವರು ಅವನ ಕಡೆ ಇದ್ದುದರಿಂದ, ಅವುಗಳನ್ನು ಭದ್ರಪಡಿಸಿದನು.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ನೀತಿಯನ್ನು ಹಿಂಬಾಲಿಸುವವರೇ, ಯೆಹೋವ ದೇವರನ್ನು ಹುಡುಕುವವರೇ, ನನ್ನ ಕಡೆಗೆ ಕಿವಿಗೊಡಿರಿ. ನಿಮ್ಮನ್ನು ಯಾವ ಬಂಡೆಯೊಳಗಿಂದ ಒಡೆದು ಕಡಿದಿರುತ್ತಾರೋ ಮತ್ತು ಯಾವ ಗುಂಡಿಯೊಳಗಿಂದ ಅಗೆದಿರುತ್ತಾರೋ ಆ ಬಂಡೆಯಾದಾತನನ್ನು ನೋಡಿರಿ.


ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?


ನೀವು ಬದುಕುವ ಹಾಗೆ ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ. ಆಗ ನೀವು ಹೇಳಿಕೊಳ್ಳುವಂತೆ ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.


ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು