Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:4 - ಕನ್ನಡ ಸಮಕಾಲಿಕ ಅನುವಾದ

4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿ ಅವರನ್ನು ಹುಡುಕಿದಾಗ ಅವರಿಗೆ ದೇವರು ಸಿಕ್ಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಕೊಂಡರು; ಹುಡುಕಿದಾಗ ಸರ್ವೇಶ್ವರ ಅವರಿಗೆ ಸಿಕ್ಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಇಸ್ರೇಲರು ತಮಗೆ ಕಷ್ಟಬಂದಾಗ ದೇವರ ಕಡೆಗೆ ತಿರುಗಿದರು. ಆತನೇ ಇಸ್ರೇಲಿನ ದೇವರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:4
15 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.


ಯೆಹೂದದವರೆಲ್ಲರು ಪ್ರಮಾಣಕ್ಕೆ ಸಂತೋಷಪಟ್ಟರು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಆಣೆ ಇಟ್ಟು, ತಮ್ಮ ಪೂರ್ಣ ಇಷ್ಟಪೂರ್ವಕವಾಗಿ ದೇವರನ್ನು ಹುಡುಕಿದರು; ದೇವರು ಅವರಿಗೆ ಸಿಕ್ಕಿದರು. ಯೆಹೋವ ದೇವರು ಅವರಿಗೆ ಸುತ್ತಲೂ ವಿಶ್ರಾಂತಿಕೊಟ್ಟರು.


ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.


ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.


ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ ಅವರ ಮೇಲೆ ಲಕ್ಷ್ಯವಿಟ್ಟು,


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು.


ನೀತಿಯನ್ನು ಹಿಂಬಾಲಿಸುವವರೇ, ಯೆಹೋವ ದೇವರನ್ನು ಹುಡುಕುವವರೇ, ನನ್ನ ಕಡೆಗೆ ಕಿವಿಗೊಡಿರಿ. ನಿಮ್ಮನ್ನು ಯಾವ ಬಂಡೆಯೊಳಗಿಂದ ಒಡೆದು ಕಡಿದಿರುತ್ತಾರೋ ಮತ್ತು ಯಾವ ಗುಂಡಿಯೊಳಗಿಂದ ಅಗೆದಿರುತ್ತಾರೋ ಆ ಬಂಡೆಯಾದಾತನನ್ನು ನೋಡಿರಿ.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು