Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:6 - ಕನ್ನಡ ಸಮಕಾಲಿಕ ಅನುವಾದ

6 ಜನಾಂಗವು ಜನಾಂಗದಿಂದಲೂ, ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ದೇವರು ಸಕಲ ಇಕ್ಕಟ್ಟುಗಳಿಂದ ಅವರನ್ನು ತೊಂದರೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಂದು ಜನಾಂಗ ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳುಮಾಡುತ್ತಿದ್ದರು. ದೇವರು ನಾನಾ ತರದ ಕಷ್ಟದಿಂದ ಅವರನ್ನು ತಳಮಳಗೊಳಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರದ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದನು. ನೀವಾದರೋ ಸ್ಥಿರಚಿತ್ತರಾಗಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಂದು ದೇಶವು ಇನ್ನೊಂದು ದೇಶವನ್ನು ನಾಶಮಾಡುತ್ತಿತ್ತು; ಒಂದು ಪಟ್ಟಣವು ಇನ್ನೊಂದು ಪಟ್ಟಣವನ್ನು ಸೂರೆಮಾಡುತ್ತಿತ್ತು. ಹೀಗೆ ದೇವರು ಎಲ್ಲಾ ಬಗೆಯ ತೊಂದರೆಗಳಿಂದ ಅವರನ್ನು ತಳಮಳಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:6
15 ತಿಳಿವುಗಳ ಹೋಲಿಕೆ  

ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಬರಗಾಲಗಳು ಉಂಟಾಗುವವು, ಇವು ಪ್ರಸವವೇದನೆಯ ಪ್ರಾರಂಭ ಮಾತ್ರ.


ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ಅವರನ್ನು ಇತರ ಜನಾಂಗಗಳ ಕೈಗೆ ಒಪ್ಪಿಸಿಕೊಟ್ಟರು. ಹೀಗೆ ಅವರ ವೈರಿಗಳು ಅವರನ್ನು ಆಳಿದರು.


ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಅಬೀಯನೂ, ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿದರು. ಇಸ್ರಾಯೇಲರಲ್ಲಿ ಐದು ಲಕ್ಷಮಂದಿ ಬಲಶಾಲಿಗಳಾದ ಸೈನಿಕರು ಹತರಾದರು.


ರೆಹಬ್ಬಾಮನು ಅರಸನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ, ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋವನ ಪುಸ್ತಕದಲ್ಲಿಯೂ ಬರೆದಿರುತ್ತವೆ. ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವುದು. ಭೂಮಿಯ ಮೇರೆಗಳಿಂದ ಮಹಾ ಬಿರುಗಾಳಿ ಏಳುವುದು.”


ಇದಲ್ಲದೆ ನಾನು ಈಜಿಪ್ಟಿನವನಿಗೆ ವಿರೋಧವಾಗಿ ಈಜಿಪ್ಟಿನವನನ್ನು ಎಬ್ಬಿಸುವೆನು. ಸಹೋದರನಿಗೆ ವಿರುದ್ಧವಾಗಿ ಸಹೋದರನೂ, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೊರಾಡುವವು.


ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು