Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:3 - ಕನ್ನಡ ಸಮಕಾಲಿಕ ಅನುವಾದ

3 “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದ ಇದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ; ಇಸ್ರಯೇಲರ ಅರಸ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಿರುತ್ತದಲ್ಲಾ; ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ; ಇಸ್ರಾಯೇಲ್ಯರ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಬೆನ್ಹದದನೇ, ನಮ್ಮೊಂದಿಗೆ ಒಂದು ಒಪ್ಪಂದವಿರಲಿ. ನನ್ನ ತಂದೆಯೂ ನಿನ್ನ ತಂದೆಯೂ ಮಾಡಿದ್ದ ಒಪ್ಪಂದವನ್ನು ನಾವು ಮುಂದುವರಿಸೋಣ. ನೋಡು, ನಾನೀಗ ನಿನಗೆ ಬೆಳ್ಳಿಬಂಗಾರಗಳನ್ನು ಕಳುಹಿಸುತ್ತಿದ್ದೇನೆ. ನೀನೀಗ ಇಸ್ರೇಲಿನ ರಾಜನಾದ ಬಾಷನೊಡನೆ ಮಾಡಿದ್ದ ಒಪ್ಪಂದವನ್ನು ಮುರಿದುಹಾಕು. ಆಗ ಅವನು ನನಗೆ ತೊಂದರೆ ಕೊಡುವುದನ್ನು ನಿಲ್ಲಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:3
16 ತಿಳಿವುಗಳ ಹೋಲಿಕೆ  

ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.


ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.


ಇಸ್ರಾಯೇಲಿನ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಅದಕ್ಕವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಾವು ಯುದ್ಧದಲ್ಲಿ ನಿನ್ನ ಸಂಗಡ ಇರುವೆವು,” ಎಂದನು.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು.


‘ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ, ಅವರ ಬಲಿಪೀಠಗಳನ್ನು ಕೆಡಿವಿಬಿಡಿರಿ,’ ಎಂದು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಏಕೆ ಮಾಡಿದಿರಿ?


ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು.


ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.


ಆಗ ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಬೆಳ್ಳಿಬಂಗಾರವನ್ನು ತೆಗೆದು, ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ ಅವನಿಗೆ,


ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಅವರು ಇಯ್ಯೋನ್, ದಾನ್ ಆಬೇಲ್ಮಯಿಮ್, ನಫ್ತಾಲ್ಯರ ಸಮಸ್ತ ಉಗ್ರಾಣಗಳ ಪಟ್ಟಣಗಳನ್ನು ವಶಪಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು