Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:4 - ಕನ್ನಡ ಸಮಕಾಲಿಕ ಅನುವಾದ

4 ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಅವರು ಇಯ್ಯೋನ್, ದಾನ್ ಆಬೇಲ್ಮಯಿಮ್, ನಫ್ತಾಲ್ಯರ ಸಮಸ್ತ ಉಗ್ರಾಣಗಳ ಪಟ್ಟಣಗಳನ್ನು ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಯೇಲರ ಪಟ್ಟಣಗಳಿಗೆ ವಿರುದ್ಧ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲ ಉಗ್ರಾಣಗಳನ್ನೂ ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರೋಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣಮಾಡಲು ಕಳುಹಿಸಿದನು. ಅವರು ಹೋಗಿ ಇಯ್ಯೋನ್, ದಾನ್, ಅಬೇಲ್ಮಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ತಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:4
14 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ಬರಬರುತ್ತಾ ಬಹಳ ಅಭಿವೃದ್ಧಿಯಾಗಿ ಯೆಹೂದದಲ್ಲಿ ಅರಮನೆಗಳನ್ನೂ, ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.


ಅಲ್ಲದೆ, ಬಾಲಾತ್ ಪಟ್ಟಣವನ್ನೂ, ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.


ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು.


ಇದಲ್ಲದೆ ಸೊಲೊಮೋನನು ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.


ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.


ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ತನ್ನ ಸಹೋದರನ ಮಗನು ಸೆರೆಯಾಗಿ ಹೋಗಿರುವುದನ್ನು ಕೇಳಿದಾಗ, ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ, ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ, ದಾನಿನವರೆಗೆ ಹಿಂದಟ್ಟಿದನು.


ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.


ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


“ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದು ಹೇಳಿದನು.


ಬಾಷನು ಇದನ್ನು ಕೇಳಿದಾಗ ರಾಮ ಪಟ್ಟಣದ ಸುತ್ತಲೂ ಕೋಟೆ ಕಟ್ಟಿಸುವುದನ್ನು ಬಿಟ್ಟು, ಅದರ ಎಲ್ಲಾ ಕೆಲಸಗಳನ್ನು ನಿಲ್ಲಿಸಿಬಿಟ್ಟನು.


ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ.


ಆಗ ಅಸ್ಸೀರಿಯದ ಅರಸನು ಅವನ ಮಾತು ಕೇಳಿ, ದಮಸ್ಕಕ್ಕೆ ಹೋಗಿ, ಅದನ್ನು ಮುತ್ತಿಗೆ ಹಾಕಿ, ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು, ರೆಚೀನನನ್ನು ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು