Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:10 - ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದುದರಿಂದ, ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜುದೇಯದ ಸುತ್ತಲಿನ ದೇಶಗಳ ರಾಜ್ಯಗಳವರೆಗೆ ಸರ್ವೇಶ್ವರನ ಭಯವಿತ್ತು. ಆದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರಿಗೆ ಯೆಹೋವನ ಭಯವಿದ್ದದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೂದದ ಸುತ್ತಮುತ್ತಲಿನ ದೇಶಗಳ ಜನಾಂಗಗಳು ಯೆಹೋವನಿಗೆ ಭಯಪಟ್ಟರು. ಆದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಕ್ಕೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:10
10 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.


ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಏಕೆಂದರೆ ನಾನು ಜನಾಂಗಗಳನ್ನು ನಿಮ್ಮ ಸನ್ನಿಧಿಯಿಂದ ಹೊರಡಿಸಿಬಿಟ್ಟು, ನಿಮ್ಮ ಮೇರೆಗಳನ್ನು ವಿಸ್ತಾರ ಮಾಡುವೆನು. ವರ್ಷಕ್ಕೆ ಮೂರು ಸಾರಿ ನೀವು ನಿಮ್ಮ ಯೆಹೋವ ದೇವರ ಮುಂದೆ ಬರುವ ಸಮಯದಲ್ಲಿ ಯಾರೂ ನಿಮ್ಮ ಭೂಮಿಯನ್ನು ಅಪಹರಿಸಲು ಆಶೆಪಡುವುದಿಲ್ಲ.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ಯೆಹೋವ ದೇವರು ಇಸ್ರಾಯೇಲರ ಶತ್ರುಗಳ ಮೇಲೆ ಯುದ್ಧ ಮಾಡಿದರೆಂದು ಜನರು ಕೇಳಿದಾಗ, ದೇವರ ಭಯವು ಆ ದೇಶದಲ್ಲಿ ಸಕಲ ರಾಜ್ಯಗಳ ಮೇಲೆ ಇತ್ತು.


ಆಗ ಆಸನೂ, ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನವರೆಗೂ ಹಿಂದಟ್ಟಿದರು. ಹೆಚ್ಚಿನ ಸಂಖ್ಯೆಯಲ್ಲಿ ಕೂಷ್ಯರು ಸೋತುಹೋದರು. ಅವರು ಯೆಹೋವ ದೇವರ ಮುಂದೆಯೂ, ಅವರ ಸೈನ್ಯದ ಮುಂದೆಯೂ ನಾಶವಾದರು. ಯೆಹೂದ್ಯರು ಬಹು ಕೊಳ್ಳೆಯನ್ನು ಒಯ್ದರು.


ಅವರು ಹಾವಿನಂತೆ, ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. ಅವರು ರಂಧ್ರಗಳಿಂದ ಹೊರಗೆ ಬರುವರು. ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. ನಿನಗೆ ಭಯಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು