Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:14 - ಕನ್ನಡ ಸಮಕಾಲಿಕ ಅನುವಾದ

14 ತಮ್ಮ ಪಿತೃಗಳ ಮನೆಯ ಪ್ರಕಾರವಾಗಿರುವ ಅವರ ಲೆಕ್ಕವೇನೆಂದರೆ: ಯೆಹೂದದ 1,000 ಅಧಿಪತಿಗಳಲ್ಲಿ ಅದ್ನಾನು ಮುಖ್ಯಸ್ಥನಾಗಿದ್ದನು. ಅವನ ಸಂಗಡ ಪರಾಕ್ರಮಶಾಲಿಗಳು 3,00,000 ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗೋತ್ರಗಳ ಪ್ರಕಾರ ಲೆಕ್ಕಿತರಾದ ಈ ಸೇನಾನಾಯಕರ ಕ್ರಮಬದ್ಧ ಪಟ್ಟಿಯಿದು; ಅದ್ನ - ಇವನು ಯೆಹೂದ್ಯರಲ್ಲಿ ಮೂರು ಲಕ್ಷಮಂದಿ ರಣವೀರರ ಅಧಿಪತಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಇವರ ಗೋತ್ರಪ್ರಧಾನರು ಯಾರಂದರೆ - ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ರಣವೀರರ ಅಧಿಪತಿಯಾದ ಅದ್ನ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಬೇರೆಬೇರೆ ಕುಲಗಳಿಂದ ಬಂದವರಾಗಿದ್ದರು. ಯೆಹೂದಕುಲದ ಅದ್ನನು ಮೂರುಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:14
11 ತಿಳಿವುಗಳ ಹೋಲಿಕೆ  

ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ 3,07,500 ಮಂದಿಯುಳ್ಳ ಸೈನ್ಯವಿತ್ತು.


ಇದಲ್ಲದೆ ಆಸನಿಗೆ ದೊಡ್ಡ ಗುರಾಣಿಗಳನ್ನೂ, ಈಟಿಗಳನ್ನೂ ಹಿಡಿಯುವ ಸೈನ್ಯವಿತ್ತು. ಯೆಹೂದದವರು ಮೂರು ಲಕ್ಷ ಮಂದಿಯೂ, ಬೆನ್ಯಾಮೀನವರಲ್ಲಿ ಚಿಕ್ಕ ಗುರಾಣಿಗಳನ್ನು ಹಿಡಿಯುವ, ಬಿಲ್ಲುಗಳನ್ನು ಎಸೆಯುವ ಎರಡು ಲಕ್ಷದ ಎಂಬತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿ ಯುದ್ಧವೀರರಾಗಿದ್ದರು.


ಆಗ ಅಬೀಯನು ಯುದ್ಧಭಟರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯ್ಕೆಯಾದ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷಮಂದಿ ಆಯ್ಕೆಯಾದ ಪರಾಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.


ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು, ಯೆಹೂದ ಮತ್ತು ಬೆನ್ಯಾಮೀನವರ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.


ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಜನರು ತಮ್ಮ ಗೋತ್ರ ಮತ್ತು ಕುಟುಂಬಗಳ ಅನುಸಾರವಾಗಿ ತಮ್ಮ ವಂಶಾವಳಿಯನ್ನು ನೊಂದಾಯಿಸಿದರು. ಹಾಗೂ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಾದ ವಯಸ್ಸಿನವರ ಹೆಸರುಗಳನ್ನು ಒಬ್ಬೊಬ್ಬರಾಗಿ ಪಟ್ಟಿಮಾಡಲಾಯಿತು.


“ಇಸ್ರಾಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.


ಯೆಹೋವ ದೇವರು ಅವನನ್ನು ಹೊರಗೆ ಕರೆದುಕೊಂಡು ಬಂದು, “ಈಗ ನೀನು ಆಕಾಶವನ್ನು ದೃಷ್ಟಿಸಿ, ನಕ್ಷತ್ರಗಳನ್ನು ಲೆಕ್ಕಿಸಲು ನಿನ್ನಿಂದಾದರೆ, ಲೆಕ್ಕಿಸು. ಅದರಂತೆಯೇ ನಿನ್ನ ಸಂತತಿಯು ಆಗುವುದು,” ಎಂದು ಹೇಳಿದರು.


ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ದವಸ ಧಾನ್ಯಗಳ ದೊಡ್ಡ ಮಳಿಗೆಯನ್ನು ಕಟ್ಟಿದನು. ಪರಾಕ್ರಮಶಾಲಿಗಳಾದ ಯುದ್ಧವೀರರು ಯೆರೂಸಲೇಮಿನಲ್ಲಿದ್ದರು.


ಅವನ ತರುವಾಯ ಅಧಿಪತಿಯಾದ ಯೆಹೋಹಾನಾನನು; ಅವನ ಸಂಗಡ 2,80,000 ಮಂದಿಯು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು