Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:4 - ಕನ್ನಡ ಸಮಕಾಲಿಕ ಅನುವಾದ

4 ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವನು ಇಸ್ರಯೇಲರಂತೆ ನಡೆಯದೆ, ತನ್ನ ಪಿತೃವಿನ ದೇವರಲ್ಲಿ ಭಕ್ತಿಯಿಟ್ಟು ಅವರ ಆಜ್ಞೆಗಳನ್ನು ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವನು ಇಸ್ರಾಯೇಲ್ಯರಂತೆ ನಡೆಯದೆ ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:4
21 ತಿಳಿವುಗಳ ಹೋಲಿಕೆ  

ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


“ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ.


ಯೆಹೂದದವರು ಸಹ ತಮ್ಮ ಯೆಹೋವ ದೇವರ ಆಜ್ಞೆಗಳನ್ನು ಕೈಕೊಳ್ಳದೆ, ಇಸ್ರಾಯೇಲರ ಪದ್ಧತಿಗಳಲ್ಲಿಯೇ ನಡೆದರು.


ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಹೀಗೆ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಅವನು ಬೇತೇಲಿನಲ್ಲಿ ಕಟ್ಟಿಸಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ, ಇಸ್ರಾಯೇಲರಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.


ಇದು ಪಾಪಕ್ಕೆ ಕಾರಣವಾಯಿತು. ದಾನಿನಲ್ಲಿರುವುದನ್ನು ಪೂಜಿಸಲು ಜನರು ಅಲ್ಲಿಯವರೆಗೆ ಹೋಗುತ್ತಿದ್ದರು.


ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು.


ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ,


ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.


ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು.


“ನೀನು ನಿನ್ನ ತಂದೆಯಾದ ದಾವೀದನಂತೆ ಸಂಪೂರ್ಣ ಹೃದಯದಿಂದಲೂ, ಯಥಾರ್ಥತೆಯಿಂದಲೂ ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,


ಇದಲ್ಲದೆ ಅವನು ಯೆಹೂದದಲ್ಲಿ ಕೋಟೆಗಳುಳ್ಳ ಪಟ್ಟಣಗಳನ್ನು ಕಟ್ಟಿದನು. ಏಕೆಂದರೆ ದೇಶವು ಶಾಂತವಾಗಿತ್ತು. ಯೆಹೋವ ದೇವರು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರ್ಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.


ಹೀಗೆ ಯೋತಾಮನು ತನ್ನ ದೇವರಾದ ಯೆಹೋವ ದೇವರ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿಕೊಂಡದ್ದರಿಂದ ಅವನು ಬಲಗೊಂಡನು.


ಅವನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು