Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:13 - ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ನನ್ನ ದೇವರು ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ನನ್ನ ದೇವರು ಹೇಳುವುದನ್ನು ಮಾತ್ರ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಮೀಕಾಯೆಹುವು - ಯೆಹೋವನಾಣೆ, ನನ್ನ ದೇವರು ಹೇಳುವದನ್ನೇ ನುಡಿಯುತ್ತೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಮೀಕಾಯೆಹುವು, “ಯೆಹೋವನಾಣೆ, ಆತನು ಹೇಳಿದ್ದನ್ನೇ ನಾನು ಹೇಳುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:13
17 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರ ದೂತನು ಬಿಳಾಮನಿಗೆ, “ಈ ಮನುಷ್ಯರ ಸಂಗಡ ಹೋಗು ಆದರೆ ನಾನು ನಿನಗೆ ಹೇಳುವುದನ್ನೇ ಹೇಳಬೇಕೇ ಹೊರತು ಬೇರೆ ಯಾವದನ್ನೂ ಹೇಳಬಾರದು,” ಎಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.


‘ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಬಂಗಾರಗಳನ್ನು ಕೊಟ್ಟರೂ, ನನ್ನ ಹೃದಯದಿಂದ ಒಳ್ಳೆಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡುವುದಕ್ಕೆ ಯೆಹೋವ ದೇವರ ಆಜ್ಞೆಯನ್ನು ಮೀರಲಾರೆನು. ಯೆಹೋವ ದೇವರು ಏನು ಹೇಳುತ್ತಾರೋ, ಅದನ್ನೇ ಹೇಳುವೆನೆಂದು ನಾನು ಹೇಳಲಿಲ್ಲವೋ’? ಈಗ, ನನ್ನ ಜನರ ಬಳಿಗೆ ಹೋಗುತ್ತೇನೆ.


ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.


ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ.


ನಾನು ಕರ್ತ ದೇವರಿಂದಲೇ ಪಡೆದದ್ದನ್ನು ನಿಮಗೆ ಒಪ್ಪಿಸಿಕೊಟ್ಟಿದ್ದೇನೆ: ಕರ್ತ ಆಗಿರುವ ಯೇಸು ತಮ್ಮನ್ನು ಹಿಡಿದುಕೊಡಲಾದ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು,


ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.


ಆಗ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಾನು ಕೇಳಿದ್ದೇನೆ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆ ಮಾಡುತ್ತೇನೆ. ಯೆಹೋವ ದೇವರು ನಿಮಗೆ ಯಾವ ಉತ್ತರವನ್ನು ಕೊಡುವರೋ, ಅದನ್ನು ನಿಮಗೆ ತಿಳಿಸುವೆನು. ಒಂದು ಮಾತನ್ನಾದರೂ ನಿಮ್ಮಿಂದ ಹಿಂದೆಗೆಯುವುದಿಲ್ಲ,” ಎಂದು ಹೇಳಿದನು.


ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.


ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರು ನನಗೆ ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.


ಆದರೆ ಬಿಳಾಮನು ಉತ್ತರವಾಗಿ, “ಬಾಲಾಕನಿಗೆ ಯೆಹೋವ ದೇವರು ಹೇಳುವುದನ್ನೆಲ್ಲಾ ನಾನು ಮಾಡುವೆನೆಂದು ನಿನಗೆ ಹೇಳಲಿಲ್ಲವೋ?” ಎಂದನು.


ಅದಕ್ಕೆ ಅವನು ಉತ್ತರವಾಗಿ, “ಯೆಹೋವ ದೇವರು ನನ್ನ ಬಾಯಿಯೊಳಗೆ ಇಡುವ ಮಾತನ್ನೇ ನಾನು ನುಡಿಯಬೇಕಲ್ಲವೇ?” ಎಂದನು.


ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.


ಅವನು ಅರಸನ ಬಳಿಗೆ ಬಂದಾಗ, ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಅವರು ನಿಮ್ಮ ಕೈವಶರಾಗುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು