Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:22 - ಕನ್ನಡ ಸಮಕಾಲಿಕ ಅನುವಾದ

22 “ಆದ್ದರಿಂದ ಇಗೋ, ಯೆಹೋವ ದೇವರು ಈ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನೇ ಕಳುಹಿಸಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆದ್ದರಿಂದ ಅಹಾಬನೇ, ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳುಹೇಳುವ ಆತ್ಮವನ್ನು ಯೆಹೋವನೇ ಇರಿಸಿದ್ದಾನೆ; ನಿನಗೆ ಕೇಡಾಗುವುದೆಂದು ಯೆಹೋವನೇ ತಿಳಿಸುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:22
18 ತಿಳಿವುಗಳ ಹೋಲಿಕೆ  

“ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.


ಯೆಹೋವ ದೇವರು ಅವರ ಮಧ್ಯದಲ್ಲಿ ತತ್ತರಿಸುವ ಆತ್ಮವನ್ನು ಸುರಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಈಜಿಪ್ಟ್ ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.


ಬಲವೂ, ಜ್ಞಾನವೂ ದೇವರಲ್ಲಿವೆ; ವಂಚಕ ಹಾಗು ವಂಚಿತ ದೇವರಿಗೆ ಒಳಪಟ್ಟವರು.


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ, “ಇಗೋ, ನಾನು ಈ ವಂಶಕ್ಕೆ ವಿರೋಧವಾಗಿ ನಾಶನವನ್ನು ಯೋಚಿಸುತ್ತೇನೆ. ಇದರಿಂದ ನೀವು ನಿಮ್ಮನ್ನು ರಕ್ಷಿಸಿಕೊಳ್ಳಲಾರಿರಿ. ಅಹಂಕಾರವಾಗಿ ನಡೆಯದೆ ಇರುವಿರಿ. ಇದು ವಿಪತ್ತಿನ ಕಾಲವೇ,


“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.


ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.


ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.


“ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು