Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:29 - ಕನ್ನಡ ಸಮಕಾಲಿಕ ಅನುವಾದ

29 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, ‘ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ,” ಎಂದು ಹೇಳಿ ವೇಷಹಾಕಿಕೊಂಡನು; ತರುವಾಯ ರಣರಂಗಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲ್ಯರ ಅರಸನು ಯೆಹೋಷಾಫಾಟನಿಗೆ - ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ ಎಂದು ಹೇಳಿ ವೇಷಹಾಕಿಕೊಂಡನು; ತರುವಾಯ ರಣರಂಗಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋಷಾಫಾಟನಿಗೆ ಅಹಾಬನು, “ನಾನು ಯುದ್ಧರಂಗಕ್ಕೆ ಹೋಗುವ ಮೊದಲು ವೇಷ ಬದಲಾಯಿಸುತ್ತೇನೆ. ನೀನು ರಾಜವಸ್ತ್ರದಲ್ಲಿಯೇ ಇರು” ಎಂದು ಹೇಳಿ ತನ್ನ ರೂಪವನ್ನು ಬದಲಾಯಿಸಿದನು. ಇಬ್ಬರು ರಾಜರೂ ಯುದ್ಧರಂಗಕ್ಕಿಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:29
10 ತಿಳಿವುಗಳ ಹೋಲಿಕೆ  

ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ, ತನ್ನ ಸಂಗಡ ಇಬ್ಬರನ್ನು ಕರೆದುಕೊಂಡು, ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ, “ನೀನು ದಯಮಾಡಿ ಸತ್ತವರ ಆತ್ಮವನ್ನು ವಿಚಾರಿಸಿ ನನಗೆ ಕಣಿ ಹೇಳು. ನಾನು ನಿನಗೆ ಹೇಳುವವನನ್ನು ನನಗೆ ಕಾಣುವಂತೆ ಮಾಡು,” ಎಂದನು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.


ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.


ವ್ಯಭಿಚಾರಿಯು ಸಂಜೆಯನ್ನು ಎದುರುನೋಡುತ್ತಿರುವನು. ತರುವಾಯ, ‘ಯಾವ ಕಣ್ಣೂ ನನ್ನನ್ನು ನೋಡುವುದಿಲ್ಲ,’ ಎಂದು ಹೇಳುತ್ತಾನೆ; ಯಾರು ತನ್ನನ್ನು ಕಾಣದಂತೆ ಮುಖವನ್ನು ಮುಚ್ಚಿಕೊಳ್ಳುತ್ತಾನೆ.


ಆಗ ಪ್ರವಾದಿಯು ಹೋಗಿ ತನ್ನ ಕಣ್ಣುಗಳನ್ನು ಮುಂಡಾಸದಿಂದ ಮುಚ್ಚಿಕೊಂಡು ತನ್ನನ್ನು ಮರೆಮಾಡಿಕೊಂಡು, ಅರಸನಾದ ಅಹಾಬನಿಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.


ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.


ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು