Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:30 - ಕನ್ನಡ ಸಮಕಾಲಿಕ ಅನುವಾದ

30 ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸಿರಿಯಾದವರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿಯಿಡಿ", ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅರಾಮ್ಯರ ರಾಜನು ತನ್ನ ರಥದ ಅಧಿಪತಿಗಳಿಗೆ, “ನೀವು ಜನರೊಂದಿಗೆ ಯುದ್ಧಮಾಡಬೇಡಿರಿ, ಅಧಿಕಾರಿಗಳ ಮತ್ತು ಸಾಮಾನ್ಯ ಸೈನಿಕರ ಗೊಡವೆಗೆ ಹೋಗಬೇಡಿರಿ. ಆದರೆ ನೀವು ಇಸ್ರೇಲಿನ ರಾಜನಾದ ಅಹಾಬನೊಂದಿಗೇ ಯುದ್ಧಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:30
8 ತಿಳಿವುಗಳ ಹೋಲಿಕೆ  

ಯಾವನಾದರೂ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕದೆ ಹೋದರೆ; ಹಿರಿಯನಾದರೂ, ಕಿರಿಯನಾದರೂ, ಪುರುಷನಾದರೂ, ಸ್ತ್ರೀಯಾದರೂ ಸಾಯಬೇಕೆಂದು ಒಡಂಬಡಿಕೆ ಮಾಡಿಕೊಂಡರು.


ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು.


ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ.


ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು.


ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೆರಡು ಮಂದಿ ಪ್ರಧಾನರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು.


ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆದರೆ ಯೆಹೋಷಾಫಾಟನು ಕೂಗಿಕೊಂಡನು. ಆಗ ಯೆಹೋವ ದೇವರು ಅವನಿಗೆ ಸಹಾಯಮಾಡಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು