Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:34 - ಕನ್ನಡ ಸಮಕಾಲಿಕ ಅನುವಾದ

34 ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನಾದ ಅಹಾಬನು ಸಾಯಂಕಾಲದವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು, ಸೂರ್ಯನು ಅಸ್ತಮಿಸಿದಾಗ ಅವನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆ ದಿವಸ ಯುದ್ಧ ಬಹುಘೋರವಾಗಿತ್ತು. ಆದ್ದರಿಂದ ಇಸ್ರಯೇಲರ ಅರಸನು ಸಾಯಂಕಾಲದವರೆಗೂ ಸಿರಿಯಾದವರ ಎದುರಿಗೆ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು.ಸೂರ್ಯಾಸ್ತಮಾನವಾದಾಗ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದರೂ ಆ ದಿವಸ ಯುದ್ಧವು ಬಹು ಘೋರವಾಗಿದ್ದದರಿಂದ ಇಸ್ರಾಯೇಲ್ಯರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿದ್ದು ಸೂರ್ಯಾಸ್ತಮಾನವಾದಾಗ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆ ದಿವಸ ಯುದ್ಧವು ಬಲುಘೋರವಾಗಿ ನಡೆಯಿತು. ಅಹಾಬನು ರಥದ ಕಂಬಕ್ಕೆ ಒರಗಿ ಸಂಜೆಯ ತನಕ ಹಾಗೆಯೇ ಅರಾಮ್ಯರ ಎದುರು ನಿಂತುಕೊಂಡಿದ್ದನು. ಸೂರ್ಯಾಸ್ತಮಾನವಾದಾಗ ಅಹಾಬನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:34
8 ತಿಳಿವುಗಳ ಹೋಲಿಕೆ  

ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.


ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು.


ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ, ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.


ಆಗ ಯೆಹೋವ ದೇವರು, ‘ಇಸ್ರಾಯೇಲಿನ ಅರಸನಾದ ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.


ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ. ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.


“ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.


ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.


ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಅರಮನೆಗೆ ತಿರುಗಿಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು