Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿ ಇರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗೆನ್ನಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗೆ ಹೇಳಬಾರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಅರಸನಾದ ಅಹಾಬನು, “ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕೆಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇಮ್ಲನ ಮಗನಾದ ಮೀಕಾಯೆಹುವು” ಅಂದನು. ಅದಕ್ಕೆ ಯೆಹೋಷಾಫಾಟನು, “ಅಹಾಬನೇ, ನೀನು ಹಾಗೆ ಹೇಳಬಾರದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:7
30 ತಿಳಿವುಗಳ ಹೋಲಿಕೆ  

ಯಾಕೋಬಿನ ಮನೆತನದವರೇ, “ಯೆಹೋವ ದೇವರ ಆತ್ಮವು ಕೋಪಗೊಂಡಿದೆಯೇ? ಅವರು ಇಂಥ ಕಾರ್ಯ ಮಾಡುವರೋ?” “ಯಥಾರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೆಯದನ್ನು ಮಾಡುವುದಿಲ್ಲವೋ?


ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ.


ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.


ಅವರು ನೋಡುವವರಿಗೆ, “ನೋಡಬೇಡಿರಿ,” ಎಂದು ಪ್ರವಾದಿಗಳಿಗೆ, “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ, ನಮಗೆ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ. ನಯವಾದವುಗಳನ್ನೇ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,


ಅಹಾಬನು ಎಲೀಯನನ್ನು ಕಂಡಾಗ ಅವನಿಗೆ, “ಇಸ್ರಾಯೇಲನ್ನು ಕಷ್ಟಕ್ಕೆ ಒಳಪಡಿಸುವವನು ನೀನಲ್ಲವೋ?” ಎಂದನು.


ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ?


ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.


ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ಕೂಡಲೇ ಅರಸನು ಯೋಹಾನನ ತಲೆಯನ್ನು ತರಬೇಕೆಂದು ಒಬ್ಬ ಕಾವಲುಗಾರನಿಗೆ ಅಪ್ಪಣೆಕೊಟ್ಟು ಕಳುಹಿಸಿದನು. ಅವನು ಹೋಗಿ ಸೆರೆಮನೆಯಲ್ಲಿದ್ದ ಯೋಹಾನನ ಶಿರಚ್ಛೇದನ ಮಾಡಿದನು.


ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ಕೊಲೆಪಾತಕರು ಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ಆದರೆ ಯಥಾರ್ಥವಂತರನ್ನು ನಾಶಮಾಡಲು ಯತ್ನಿಸುತ್ತಾರೆ.


ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.


ಪರಿಹಾಸ್ಯ ಮಾಡುವವನನ್ನು ಗದರಿಸಬೇಡ ಅವನು ನಿನ್ನನ್ನು ಹಗೆ ಮಾಡುವನು; ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.


ನನ್ನನ್ನು ಕೆಸರಿನೊಳಗಿಂದ ಬಿಡಿಸಿರಿ. ನಾನು ಮುಳುಗದೆ ಇರಲಿ. ನನ್ನನ್ನು ದ್ವೇಷಿಸಿಸುವವರಿಂದಲೂ ನೀರಿನ ಅಗಾಧದಿಂದಲೂ ನನಗೆ ಬಿಡುಗಡೆ ಆಗಲಿ.


ಶತ್ರುವಿನ ಗರ್ಜನೆಯಿಂದಲೂ ದುಷ್ಟರ ಬೆದರಿಕೆಯಿಂದಲೂ ನರಳುತ್ತೇನೆ. ಏಕೆಂದರೆ ಅವರು ಅಪರಾಧವನ್ನು ನನ್ನ ಮೇಲೆ ಬರಮಾಡಿ, ಕೋಪದಿಂದ ನನ್ನನ್ನು ಹಗೆ ಮಾಡುತ್ತಾರೆ.


ಕೇಡು ದುಷ್ಟನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಶಿಕ್ಷೆಗೆ ಒಳಗಾಗುವರು.


ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ನನ್ನ ದೇವರು ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.


ಯೋರಾಮನು ಯೇಹುವನ್ನು ಕಂಡಾಗ, “ಯೇಹುವೇ, ಸಮಾಧಾನದಿಂದ ಬಂದಿರುವೆಯೋ?” ಎಂದನು. ಅದಕ್ಕವನು, “ನಿನ್ನ ತಾಯಿಯಾದ ಈಜೆಬೆಲಳ ಜಾರತ್ವವೂ, ಅವಳ ಮಾಟಮಂತ್ರಗಳೂ ಅಧಿಕವಾಗಿರುವಾಗ ಸಮಾಧಾನವೆಲ್ಲಿ?” ಎಂದನು.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು.


ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು, “ಇಮ್ಲನ ಮಗನಾದ ಮೀಕಾಯನನ್ನು ಶೀಘ್ರವಾಗಿ ಕರೆದುಕೊಂಡು ಬಾ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು