Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:11 - ಕನ್ನಡ ಸಮಕಾಲಿಕ ಅನುವಾದ

11 “ಮುಖ್ಯಯಾಜಕನಾದ ಅಮರ್ಯನು ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಯೆಹೂದದ ಮನೆಯ ನಾಯಕನಾಗಿರುವ ಇಷ್ಮಾಯೇಲನ ಮಗ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇರುವರು. ಇದಲ್ಲದೆ ಲೇವಿಯರು ನಿಮ್ಮ ಮುಂದೆ ಅಧಿಕಾರಿಗಳಾಗಿರುವರು. ನೀವು ಬಲಗೊಂಡು ಕೆಲಸ ನಡೆಸಿರಿ. ಯೆಹೋವ ದೇವರು ಒಳ್ಳೆಯವರ ಸಂಗಡ ಇರುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಗೋ, ಸರ್ವೇಶ್ವರನ ಕಾರ್ಯಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಮಹಾಯಾಜಕ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯ ಕಾರ್ಯಗಳ ಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಲೇಖಕರು. ಧೈರ್ಯದಿಂದ ಕೆಲಸಮಾಡಿ. ಸರ್ವೇಶ್ವರಸ್ವಾಮಿ ಸಜ್ಜನರ ಸಹಾಯಕರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಗೋ, ಯೆಹೋವನ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯಕಾರ್ಯ ಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದಕುಲಪ್ರಭುವೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನ ಲೇಖಕರು; ಧೈರ್ಯದಿಂದ ಕೆಲಸಮಾಡಿರಿ, ಯೆಹೋವನು ಸಜ್ಜನರ ಸಹಾಯಕನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಅಮರ್ಯನು ನಿಮ್ಮ ಪ್ರಧಾನಯಾಜಕನು. ಯೆಹೋವನ ಕಾರ್ಯಗಳಿಗೆಲ್ಲಾ ಅವನೇ ನಿಮಗೆ ಪ್ರಮುಖನು. ಯೆಹೋವನ ಕುರಿತಾದ ಸಂಗತಿಗಳ ಬಗ್ಗೆ ಜೆಬದ್ಯನು ಪ್ರಮುಖನಾಗಿರುವನು. ಅವನು ಯೆಹೂದ ಕುಲದ ಇಷ್ಮಾಯೇಲನ ಮಗ. ಲೇವಿಯರು ನಿಮಗಾಗಿ ಬರವಣಿಗೆಯ ಕೆಲಸವನ್ನು ಮಾಡುವರು. ನೀವು ಮಾಡುವ ಕಾರ್ಯಗಳಲ್ಲಿ ಧೈರ್ಯಶಾಲಿಗಳಾಗಿರಿ. ಯೆಹೋವನು ನೀತಿವಂತರೊಂದಿಗಿರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:11
28 ತಿಳಿವುಗಳ ಹೋಲಿಕೆ  

ಅವರು ಯೆರೂಸಲೇಮಿಗೆ ತಿರುಗಿ ಬಂದ ತರುವಾಯ ಯೆಹೋಷಾಫಾಟನು ಯೆಹೋವ ದೇವರ ನ್ಯಾಯತೀರ್ವಿಕೆಗೋಸ್ಕರವೂ, ವ್ಯಾಜ್ಯಗಳಿಗೋಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ, ಯಾಜಕರಲ್ಲಿಯೂ, ಇಸ್ರಾಯೇಲ್ ಗೋತ್ರಪ್ರಧಾನರಲ್ಲಿಯೂ ಕೆಲವರನ್ನು ನೇಮಿಸಿ ಅವರಿಗೆ,


ಆದ್ದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲಗೊಂಡವನಾಗಿರು.


ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.


ಬಾರ್ನಬನು ಸತ್ಪುರುಷನೂ ಪವಿತ್ರಾತ್ಮಭರಿತನೂ ಪೂರ್ಣನಂಬಿಕೆಯುಳ್ಳವನೂ ಆಗಿದ್ದನು. ಅಲ್ಲಿ ಅನೇಕರು ಕರ್ತ ಯೇಸುವಿನ ಕಡೆಗೆ ಬಂದರು.


ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು, ಇವನು ಆಲೋಚನಾ ಸಭೆಯವನೂ ಒಳ್ಳೆಯವನೂ ಮತ್ತು ನೀತಿವಂತನೂ ಆಗಿದ್ದನು.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಆದ್ದರಿಂದ ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯುವೆ ನೀತಿವಂತರ ದಾರಿಯನ್ನು ನೀನು ಹಿಡಿಯುವೆ.


ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.


ಯೆಹೋವ ದೇವರಲ್ಲಿ ಯಾರು ಹರ್ಷಿಸುತ್ತಾರೋ ಅವರ ಹೆಜ್ಜೆಗಳನ್ನು ಸ್ಥಿರಪಡಿಸುವರು.


“ನೀವು ಮಾಡುವುದನ್ನು ನೋಡಿಕೊಳ್ಳಿರಿ. ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಯೆಹೋವ ದೇವರಿಗೋಸ್ಕರ ನ್ಯಾಯ ತೀರಿಸುತ್ತೀರಿ.


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.


ಹೆಬ್ರೋನಿಯರಲ್ಲಿ ಬಲವುಳ್ಳವರಾದ ಹಷಬ್ಯನೂ, ಅವನ ಸಹೋದರರೂ ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಅರಸನ ಸೇವೆಯಲ್ಲಿಯೂ ಸಾವಿರದ ಏಳು ನೂರು ಮಂದಿ ಪಶ್ಚಿಮವಾಗಿ ಯೊರ್ದನ್ ನದಿ ಈಚೆಯಲ್ಲಿ ಇಸ್ರಾಯೇಲರೊಳಗೆ ಅಧಿಪತಿಗಳಾಗಿದ್ದರು.


ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.


ಚಿನ್ನ, ಬೆಳ್ಳಿ, ಕಂಚು, ಕಬ್ಬಿಣ, ಮುಂತಾದವುಗಳಲ್ಲಿ ನಿಪುಣರು ಲೆಕ್ಕವಿಲ್ಲದಷ್ಟು ಇದ್ದಾರೆ. ಎದ್ದು ಕೆಲಸ ಮಾಡು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.


“ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಕುರಿತು ಹೇಳಿದ ಪ್ರಕಾರ, ನೀನು ಕೃತಾರ್ಥನಾಗಿ, ನೀನು ನಿನ್ನ ದೇವರಾದ ಯೆಹೋವ ದೇವರ ಆಲಯವನ್ನು ಕಟ್ಟಿಸುವಂತೆ ಅವರು ನಿನ್ನ ಸಂಗಡ ಇರಲಿ.


ಅಜರ್ಯನು ಅಮರ್ಯನನ್ನು ಪಡೆದನು, ಅಮರ್ಯನು ಅಹೀಟೂಬನನ್ನು ಪಡೆದನು,


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಇದಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಕುಟುಂಬಗಳ ಮುಖ್ಯಸ್ಥರಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ರೂಬೇನ್ಯರ ಮೇಲೆಯೂ, ಗಾದ್ಯರ ಮೇಲೆಯೂ, ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳಾಗಿ ಮಾಡಿದನು.


ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು,” ಎಂದನು.


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು