Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:9 - ಕನ್ನಡ ಸಮಕಾಲಿಕ ಅನುವಾದ

9 “ನೀವು ಈ ಕಾರ್ಯವನ್ನು ಯೆಹೋವ ದೇವರ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣಹೃದಯದಿಂದಲೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರಿಗೆ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥ ಮನಸ್ಸಿನಿಂದಲೂ ಕಾರ್ಯನಿರ್ವಹಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸವು ಯಾವದಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋಷಾಫಾಟನು ಅವರಿಗೆ, “ನೀವು ಹೃದಯಪೂರ್ವಕವಾಗಿ ನಿಮ್ಮ ಕೆಲಸ ನಡಿಸಬೇಕು. ನೀವು ಯೆಹೋವನಿಗೆ ಭಯಪಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:9
8 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.


ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ಅವರು ಯೆರೂಸಲೇಮಿಗೆ ತಿರುಗಿ ಬಂದ ತರುವಾಯ ಯೆಹೋಷಾಫಾಟನು ಯೆಹೋವ ದೇವರ ನ್ಯಾಯತೀರ್ವಿಕೆಗೋಸ್ಕರವೂ, ವ್ಯಾಜ್ಯಗಳಿಗೋಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ, ಯಾಜಕರಲ್ಲಿಯೂ, ಇಸ್ರಾಯೇಲ್ ಗೋತ್ರಪ್ರಧಾನರಲ್ಲಿಯೂ ಕೆಲವರನ್ನು ನೇಮಿಸಿ ಅವರಿಗೆ,


ಇದಲ್ಲದೆ ಜೀವಹತ್ಯ, ನ್ಯಾಯಕ್ಕೂ, ಆಜ್ಞೆಗೂ, ನಿಯಮಗಳಿಗೂ, ನ್ಯಾಯತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ, ರೌದ್ರವು ನಿಮ್ಮ ಮೇಲೆಯೂ, ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ. ಆಗ ನೀವು ಅಪರಾಧವಿಲ್ಲದವರಾಗಿರುವಿರಿ.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು