Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:4 - ಕನ್ನಡ ಸಮಕಾಲಿಕ ಅನುವಾದ

4 ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:4
16 ತಿಳಿವುಗಳ ಹೋಲಿಕೆ  

“ಅದರ ಮೇಲೆ ಆರೋನನು ಪರಿಮಳ ಧೂಪವನ್ನು ಸುಡಬೇಕು. ಪ್ರತಿದಿನ ಬೆಳಿಗ್ಗೆ ಸುಡಬೇಕು. ಪ್ರತಿದಿನ ಬೆಳಿಗ್ಗೆ ದೀಪಗಳನ್ನು ಸಿದ್ಧಮಾಡುವಾಗ ಅದನ್ನು ಸುಡಬೇಕು.


ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.


ಯೆಹೋವ ದೇವರಿಗೋಸ್ಕರ ಒಂದು ಆಲಯವನ್ನೂ, ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ಸೊಲೊಮೋನನು ಅಪ್ಪಣೆಕೊಟ್ಟನು.


ಸೊಲೊಮೋನನು ಯೆಹೋವ ದೇವರಿಗೆ ಸಮಾಧಾನದ ಬಲಿಗಳಾಗಿ 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ, ಇಸ್ರಾಯೇಲಿನ ಸಮಸ್ತ ಜನರೂ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.


ಯೆಹೋವ ದೇವರು ಆತನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೇ ಸರಿ.


ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ.


ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.


ಈ ಹಣವನ್ನು, ಸಮ್ಮುಖದ ರೊಟ್ಟಿಗೋಸ್ಕರವೂ, ನಿತ್ಯಧಾನ್ಯ ಕಾಣಿಕೆಗೋಸ್ಕರವೂ, ವಿಶ್ರಾಂತಿಯ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಅರ್ಪಿಸುವ ನಿತ್ಯ ದಹನಬಲಿಗಳಿಗೋಸ್ಕರವೂ, ನೇಮಿಸಿದ ಹಬ್ಬಗಳಿಗೋಸ್ಕರವೂ, ಇಸ್ರಾಯೇಲರ ಪ್ರಾಯಶ್ಚಿತ್ತವಾದ ದೋಷಪರಿಹಾರದ ಬಲಿಗೋಸ್ಕರವೂ, ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ಉಪಯೋಗಿಸಬೇಕು.


ದಾವೀದನು, “ನನ್ನ ಮಗ ಸೊಲೊಮೋನನು ಎಳೆಯ ಪ್ರಾಯದವನಾಗಿದ್ದಾನೆ. ಯೆಹೋವ ದೇವರಿಗೆ ಕಟ್ಟಬೇಕಾದ ಆಲಯವು ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ, ಸೌಂದರ್ಯದಲ್ಲಿಯೂ ಅಧಿಕ ಘನವುಳ್ಳದ್ದಾಗಿರಬೇಕು. ನಾನು ಅದಕ್ಕೋಸ್ಕರ ಈಗ ಸಿದ್ಧಮಾಡುವೆನು,” ಎಂದು ಹೇಳಿದನು. ಆದ್ದರಿಂದ ದಾವೀದನು ಸಾಯುವುದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.


ಯೆಹೋವ ದೇವರೇ, ದೇವರುಗಳಲ್ಲಿ ನಿಮ್ಮ ಹಾಗೆ ಯಾರೂ ಇಲ್ಲ. ನಿಮ್ಮ ಕೆಲಸಗಳ ಹಾಗೆ ಒಂದೂ ಇಲ್ಲ.


ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.


ಅವನು ತನ್ನೊಂದಿಗೆ ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; ಹುಣ್ಣಿಮೆಗೆ ಮುಂಚೆ ಅವನು ಮನೆಗೆ ಬರುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು