Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:25 - ಕನ್ನಡ ಸಮಕಾಲಿಕ ಅನುವಾದ

25 ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವುದಕ್ಕಾಗಿ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧ, ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟನ್ನೂ ಸುಲಿದುಕೊಂಡರು. ಕೊಳ್ಳೆಯ ಮೊತ್ತ ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವದಕ್ಕೋಸ್ಕರ ಅಲ್ಲಿಗೆ ಹೋಗಲು ಅವರಿಗೆ ದ್ರವ್ಯ ವಸ್ತ್ರ ಶ್ರೇಷ್ಠಾಯುಧ ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲುಕೊಂಡರು. ಕೊಳ್ಳೆಯು ಬಲುಹೆಚ್ಚಾಗಿದ್ದದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋಷಾಫಾಟನೂ ಅವನ ಸೈನಿಕರೂ ಬಂದು ಸತ್ತವರ ದೇಹದಿಂದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಅವರು ಅನೇಕ ಪಶುಗಳನ್ನು, ಐಶ್ವರ್ಯವನ್ನು, ಬಟ್ಟೆಬರೆಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡರು. ಯೆಹೋಷಾಫಾಟನು ಮತ್ತು ಅವನ ಜನರು ಹೊತ್ತುಕೊಂಡು ಹೋಗಲಾರದಷ್ಟು ವಸ್ತುಗಳಿದ್ದವು; ಅವುಗಳನ್ನು ಶೇಖರಿಸಲು ಮೂರು ದಿವಸಗಳು ಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:25
15 ತಿಳಿವುಗಳ ಹೋಲಿಕೆ  

ಮೋಶೆಯು ಅವರಿಗೆ, “ಹೆಂಗಸರನ್ನೆಲ್ಲಾ ಉಳಿಸಿದರೋ?


ಜ್ಞಾನವು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯ; ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವುದಿಲ್ಲ.


“ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು.


ಆದರೆ ಪ್ರತಿ ಸ್ತ್ರೀಯು ತನ್ನ ಮನೆಯಲ್ಲಿ ಇಳಿದುಕೊಂಡಿರುವ ಸ್ತ್ರೀಯಿಂದಲೂ ನೆರೆಯವಳಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಮತ್ತು ವಸ್ತ್ರಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಪುತ್ರಪುತ್ರಿಯರ ಮೇಲೆ ಹಾಕಿರಿ. ಹೀಗೆ ನೀವು ಈಜಿಪ್ಟಿನವರನ್ನು ಸೂರೆಮಾಡುವಿರಿ,” ಎಂದರು.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ಯೆಹೂದದವರು ಮರುಭೂಮಿಯಲ್ಲಿರುವ ಎತ್ತರದ ಸ್ಥಳಕ್ಕೆ ಬಂದು, ಅಲ್ಲಿನ ಗುಂಪನ್ನು ನೋಡಿದಾಗ, ಅವರಲ್ಲಿ ಒಬ್ಬನೂ ಉಳಿಯದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.


ನಾಲ್ಕನೆಯ ದಿವಸದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡರು. ಅಲ್ಲಿ ಯೆಹೋವ ದೇವರನ್ನು ಸ್ತುತಿಸಿದರು. ಆದಕಾರಣ ಇಂದಿನವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.


ಯುದ್ಧದ ಜನರು ಒಬ್ಬೊಬ್ಬನು ಸ್ವಂತವಾಗಿ ಸುಲಿದುಕೊಂಡಿದ್ದನು.


ಆ ಪಟ್ಟಣಗಳ ಎಲ್ಲಾ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನೆಲ್ಲಾ ಇಸ್ರಾಯೇಲರು ತಮಗೋಸ್ಕರ ಸುಲಿಗೆ ಮಾಡಿಕೊಂಡರು. ಖಡ್ಗದಿಂದ ಜನರನ್ನು ನಾಶಮಾಡಿದರು. ಒಬ್ಬರನ್ನೂ ಅವರು ಉಳಿಸಲಿಲ್ಲ.


ಯೆಹೂದವೂ ಸಹ ಯೆರೂಸಲೇಮಿನಲ್ಲಿ ಯುದ್ಧಮಾಡುವುದು. ಸುತ್ತಲಿರುವ ಎಲ್ಲಾ ಜನಾಂಗಗಳ ಸಂಪತ್ತು, ಚಿನ್ನ, ಬೆಳ್ಳಿ ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು