Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:26 - ಕನ್ನಡ ಸಮಕಾಲಿಕ ಅನುವಾದ

26 ನಾಲ್ಕನೆಯ ದಿವಸದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡರು. ಅಲ್ಲಿ ಯೆಹೋವ ದೇವರನ್ನು ಸ್ತುತಿಸಿದರು. ಆದಕಾರಣ ಇಂದಿನವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾಲ್ಕನೆಯ ದಿನದಲ್ಲಿ ಬೆರಾಕ ಕಣಿವೆಗೆ ಕೂಡಿಬಂದರು. ಅಲ್ಲಿ ಅವರು ಸರ್ವೇಶ್ವರನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ಬೆರಾಕ ಕಣಿವೆ’ ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾಲ್ಕನೆಯ ದಿವಸದಲ್ಲಿ ಯೆಹೋಷಾಫಾಟನೂ ಅವನ ಸೈನ್ಯವೂ ಬೆರಾಕ ತಗ್ಗಿನಲ್ಲಿ ಬಂದು ಸೇರಿದರು. ಅಲ್ಲಿ ಯೆಹೋವನಿಗೆ ಸ್ತೋತ್ರ ಮಾಡಿದರು. ಆದ್ದರಿಂದ ಈ ದಿನದವರೆಗೂ ಅದಕ್ಕೆ ಬೆರಾಕ ತಗ್ಗು ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:26
16 ತಿಳಿವುಗಳ ಹೋಲಿಕೆ  

“ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ.


ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.


ಆ ಕೋಲುಗಳು ಮಂಜೂಷಕ್ಕಿಂತಲೂ ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಮುಂಭಾಗದಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು, ಆದರೆ ಅವು ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇವೆ.


ಇದಾದ ಮೇಲೆ ಮೋಶೆ ಬಲಿಪೀಠವನ್ನು ಕಟ್ಟಿ, ಅದಕ್ಕೆ “ಯೆಹೋವ ನಿಸ್ಸೀ,” ಎಂದು ಹೆಸರಿಟ್ಟನು.


ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’ ” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.


ಯೆಹೋವ ದೇವರು ದಾವೀದನನ್ನು ಅವನ ಎಲ್ಲಾ ಶತ್ರುಗಳಿಂದಲೂ, ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು.


ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.


ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ.


ಇದಲ್ಲದೆ ಅವನು ಆ ಸ್ಥಳಕ್ಕೆ, ಬೇತೇಲ್, ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಸ್ಥಳಕ್ಕೆ, ಲೂಜ್ ಎಂದು ಹೆಸರಿತ್ತು.


ಅವರ ಮುಖ್ಯಸ್ಥ ಅಹೀಗೆಜೆರ್, ಇವನ ನಂತರ ಯೋವಾಷ್. ಇವರಿಬ್ಬರೂ ಗಿಬೆಯ ಊರಿನ ಶೇಮಾನ ಪುತ್ರರು. ಅಜ್ಮಾವೆತನ ಪುತ್ರರಾದ ಯೆಜಿಯೇಲ್ ಮತ್ತು ಪೆಲೆಟ್, ಅನಾತೋತ್ ಊರಿನವರಾದ ಬೆರಾಕಾ, ಯೇಹು.


ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.


ಯೆಹೋವ ದೇವರು ಅವರ ಶತ್ರುಗಳ ಮೇಲೆ ಅವರು ಸಂತೋಷಪಡುವಂತೆ ಮಾಡಿದ್ದರಿಂದ, ಅವರು ಹರ್ಷಗೊಂಡು ಯೆರೂಸಲೇಮಿಗೆ ತಿರುಗಿ ಹೋಗುವುದಕ್ಕೆ ಯೆಹೂದ ಮತ್ತು ಯೆರೂಸಲೇಮಿನವರ ಮುಂಭಾಗದಲ್ಲಿ ಯೆಹೋಷಾಫಾಟನೂ ಹೊರಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು