Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:12 - ಕನ್ನಡ ಸಮಕಾಲಿಕ ಅನುವಾದ

12 ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗಿರಲು, ಪ್ರವಾದಿ ಎಲೀಯನು ಪತ್ರದ ಮೂಲಕ ಅವನಿಗೆ, “ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರನ ಮಾತನ್ನು ಕೇಳು: ನೀನು ನಿನ್ನ ತಂದೆ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸ ಆಸನ ಮಾರ್ಗದಲ್ಲಿ ನಡೆಯಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲು ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ - ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು. ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿಯೂ ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿಯೂ ನಡೆಯಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪ್ರವಾದಿಯಾದ ಎಲೀಯನು ಯೆಹೋರಾಮನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನ ಮಾತಿದು. ಆತನು ಹೇಳುವುದೇನೆಂದರೆ, ‘ಯೆಹೋರಾಮನೇ, ನೀನು ನಿನ್ನ ತಂದೆಯಾದ ಯೆಹೋಷಾಫಾಟನು ಜೀವಿಸಿದ್ದ ರೀತಿಯಲ್ಲಿ ಜೀವಿಸುತ್ತಿಲ್ಲ. ಯೆಹೂದದೇಶದ ಅರಸನಾದ ಆಸನು ಜೀವಿಸಿದ್ದ ರೀತಿಯಲ್ಲಿಯೂ ನೀನು ಜೀವಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:12
14 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ, ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.


ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.


ಆಗ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿಯಿಂದ ಕೊಯ್ದು, ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರುಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟುಹೋಗುವವರೆಗೂ ಹಾಕಿಬಿಟ್ಟನು.


“ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.


ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.


ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಆಸನು ತನ್ನ ತಂದೆಯಾದ ದಾವೀದನ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ಅಬೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು, ಅವನ ದಿವಸಗಳಲ್ಲಿ ಹತ್ತು ವರ್ಷ ದೇಶವು ಶಾಂತವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು