Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೂ ಯೆಹೋವನು ದಾವೀದನಿಗೆ - ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದ್ದದರಿಂದ ದಾವೀದನ ಮನೆತನದವರನ್ನು ನಾಶಮಾಡುವದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:7
19 ತಿಳಿವುಗಳ ಹೋಲಿಕೆ  

ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು.


ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.”


ಪುರಾತನದಿಂದ ಅವರು ತಮ್ಮ ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, ನಮಗಾಗಿ ಬಲವಾದ ರಕ್ಷಣೆಯ ಕರ್ತದೇವರನ್ನು ಎಬ್ಬಿಸಿದ್ದಾರೆ.


ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಿದುಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ, ನಾನು ಆಯ್ದುಕೊಂಡ ಯೆರೂಸಲೇಮಿಗೋಸ್ಕರವೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು,” ಎಂದರು.


ಯೆಹೋವ ದೇವರು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾರೆ; ತಾವು ಹೀಗೆಂದು ಆಣೆಯಿಟ್ಟುಕೊಟ್ಟ ಮಾತನ್ನು ದೇವರು ಬದಲಿಸುವುದಿಲ್ಲ, “ನಿನ್ನ ಸಂತತಿಯವನನ್ನೇ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ನಿಮ್ಮ ಸೇವಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ಮಣ್ಣುಪಾಲು ಮಾಡಿದ್ದೀರಿ.


ಆದರೆ ಅರಸನಾದ ಯೆಹೋರಾಮನ ಮಗಳಾದ ಯೆಹೋಷಬತಳು, ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನನ್ನೂ ಅವನ ದಾದಿಯನ್ನೂ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು. ಹೀಗೆಯೇ ಅರಸನಾದ ಯೆಹೋರಾಮನ ಪುತ್ರಿಯರಾಗಿರುವ ಯಾಜಕನಾದ ಯೆಹೋಯಾದಾವನ ಹೆಂಡತಿಯಾಗಿರುವ ಅಹಜ್ಯನ ಸಹೋದರಿಯಾದ ಯೆಹೋಷಬತಳು, ಅತಲ್ಯಳು ಅವನನ್ನು ಕೊಲ್ಲದ ಹಾಗೆ ಬಚ್ಚಿಟ್ಟಳು.


ಆದರೂ ಯೆಹೋವ ದೇವರು ಯೆಹೂದದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸನಾದ ದಾವೀದನಿಗೆ ಪ್ರಮಾಣ ಮಾಡಿದ ಕಾರಣ ಉಳಿಸಿದರು.


“ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ.


ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.


ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು.


ಯೆಹೋರಾಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.


ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರಸನ ಸಂಗಡ ಒಡಂಬಡಿಕೆಯನ್ನು ಮಾಡಿದರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವ ದೇವರು ದಾವೀದನ ವಂಶದವರ ಬಗ್ಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಆಳತಕ್ಕವನು ಇವನೇ.


“ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿಮ್ಮ ಸಂತಾನದವರು, ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ನಿಯಮದ ಪ್ರಕಾರ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು