Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:6 - ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ಅವನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಜರ್ಯನು ಅವನನ್ನು ನೋಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಗಾಯಗಳನ್ನು ಮಾಯಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡುವುದಕ್ಕೆ ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಅಸ್ವಸ್ಥನಾಗಿದ್ದದರಿಂದ ಯೆಹೂದ್ಯರ ಅರಸನಾದ ಯೆಹೋರಾಮನಿಗೆ ಮಗನಾಗಿರುವ ಅಹಜ್ಯನು ಅವನನ್ನು ನೋಡುವದಕ್ಕೋಸ್ಕರ ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಗಾಯವನ್ನು ವಾಸಿಮಾಡಿಸಿಕೊಳ್ಳಲು ಯೋರಾಮನು ಇಜ್ರೇಲಿಗೆ ಹೋದನು. ಅರಾಮ್ಯರ ರಾಜನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಯೋರಾಮನು ಗಾಯಗೊಂಡಿದ್ದನು. ಇಜ್ರೇಲಿನಲ್ಲಿ ಅಸ್ವಸ್ಥನಾಗಿದ್ದ ಯೋರಾಮನನ್ನು ಸಂಧಿಸಲು ಯೆಹೂದ್ಯರ ಅರಸನೂ ಯೆಹೋರಾಮನ ಮಗನೂ ಆಗಿರುವ ಅಹಜ್ಯನು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:6
8 ತಿಳಿವುಗಳ ಹೋಲಿಕೆ  

ಆದರೆ ಅರಸನಾದ ಯೋರಾಮನು ಅರಾಮಿನ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ, ಅರಾಮ್ಯರು ತನ್ನನ್ನು ಹೊಡೆದ ಗಾಯವನ್ನು ಸ್ವಸ್ಥಮಾಡಿಕೊಳ್ಳುವ ನಿಮಿತ್ತ ಇಜ್ರೆಯೇಲಿಗೆ ಹೋಗಿದ್ದನು. ಆಗ ಯೇಹುವು, “ನಿಮಗೆ ಮನಸ್ಸಿದ್ದರೆ ಇದನ್ನು ಇಜ್ರೆಯೇಲಿಗೆ ಹೋಗಿ ತಿಳಿಸಲು ಪಟ್ಟಣದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ,” ಎಂದನು.


ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.


ಯೆರೂಸಲೇಮಿನ ನಿವಾಸಿಗಳು ಯೆಹೋರಾಮನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯನನ್ನು ಅರಸನಾಗಿ ಮಾಡಿದರು. ಏಕೆಂದರೆ ಪಾಳೆಯಕ್ಕೆ ಬಂದ ಅರಬಿಯರ ಗುಂಪು ಹಿರಿಯ ಮಕ್ಕಳನ್ನೆಲ್ಲಾ ಕೊಂದುಹಾಕಿದರು. ಹೀಗೆಯೇ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಲು ಆರಂಭಿಸಿದನು.


ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ನುಗ್ಗಿ, ಅರಸನ ಅರಮನೆಯಲ್ಲಿ ಸಿಕ್ಕಿದ ಸಮಸ್ತ ಸ್ಥಿತಿಯನ್ನೂ, ಅವನ ಪುತ್ರರನ್ನೂ, ಅವನ ಹೆಂಡತಿಯರನ್ನೂ ತೆಗೆದುಕೊಂಡು ಹೋದರು. ಆದ್ದರಿಂದ ಅವನ ಪುತ್ರರಲ್ಲಿ ಚಿಕ್ಕವನಾದ ಯೆಹೋವಾಹಾಜನ ಹೊರತು ಅವನಿಗೆ ಪುತ್ರರು ಯಾರೂ ಉಳಿಯಲಿಲ್ಲ.


ಆದ್ದರಿಂದ ಅರಸನಾದ ಯೋರಾಮನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡಲು ಹೋದನು.


ಇಜ್ರೆಯೇಲ್, ಯೊಗ್ದೆಯಾಮ್, ಜಾನೋಹ,


ಅಹಜ್ಯನು ಇವರ ಯೋಚನೆಯ ಪ್ರಕಾರ ನಡೆದು, ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ಯೋರಾಮನ ಸಂಗಡ ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು