Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:13 - ಕನ್ನಡ ಸಮಕಾಲಿಕ ಅನುವಾದ

13 ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಲ್ಲಿ ಅರಸನು ಬಾಗಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನರ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:13
23 ತಿಳಿವುಗಳ ಹೋಲಿಕೆ  

ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.


ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ.


ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ.


ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು.


ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.


ದಾವೀದನೂ, ಮಂಜೂಷವನ್ನು ಹೊರುವ ಲೇವಿಯರೂ, ಹಾಡುಗಾರರೂ, ಸಂಗೀತಗಾರರ ನಾಯಕನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡಿದ್ದನು.


ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೆಯೇಲ್, ಅಮಾಸೈಯೂ, ಜೆಕರ್ಯನೂ, ಬೆನಾಯನೂ, ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು. ಓಬೇದ್ ಏದೋಮನೂ, ಯೆಹೀಯನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.


ಇದಲ್ಲದೆ ಅವರ ನೆರೆಯವನಾದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ತಮ್ಮ ಎತ್ತು, ಕತ್ತೆ, ಹೇಸರಗತ್ತೆ ಮತ್ತು ಒಂಟೆಗಳ ಮೇಲೆಯೂ ರೊಟ್ಟಿಗಳನ್ನೂ ಆಹಾರವನ್ನೂ, ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ದನಕುರಿಗಳನ್ನೂ ಬಹಳವಾಗಿ ತಂದರು. ಇಸ್ರಾಯೇಲಿನಲ್ಲಿ ಸಂತೋಷವಿತ್ತು.


ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.


ಆಗ ಯೋರಾಮನು ಅಹಜ್ಯನಿಗೆ, “ಅಹಜ್ಯನೇ, ಇದು ದ್ರೋಹ!” ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.


ಆಗ ಅವರು ತ್ವರೆಪಟ್ಟು ಪ್ರತಿಯೊಬ್ಬರು ತಮ್ಮ ಹೊರ ಉಡುಪುಗಳನ್ನು ತೆಗೆದು, ಮೆಟ್ಟಿಲುಗಳ ಮೇಲೆ ಹಾಸಿ, ಇವನನ್ನು ಕುಳ್ಳಿರಿಸಿ, ತುತೂರಿಗಳನ್ನು ಊದಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.


ಆಗ ಜನರು ಆಹಾರವನ್ನೂ, ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು. ಆದರೆ ಗಿದ್ಯೋನನು ಇಸ್ರಾಯೇಲರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ, ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳಭಾಗದ ಕಣಿವೆಯಲ್ಲಿ ಇತ್ತು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಆದರೆ ಅರಸನನ್ನು ಹರಸುತ್ತಾ, ಓಡುತ್ತಾ ಇದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ, ಅವಳು ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.


ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.


ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು