Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಯಾಜಕ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರಕೊಂಡು ಹೋಗಿ ಅವರಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯಾಜಕನಾದ ಯೆಹೋಯಾದನು ಸೈನ್ಯಾಧಿಕಾರಿಗಳನ್ನು ಹೊರತಂದು, “ಅತಲ್ಯಳನ್ನು ಹೊರಗೆ ಎಳೆದುಕೊಂಡು ಹೋಗಿ, ಯಾರಾದರೂ ಆಕೆಯನ್ನು ಹಿಂಬಾಲಿಸಿದರೆ ಖಡ್ಗದಿಂದ ಅವರನ್ನು ಸಂಹರಿಸಿರಿ” ಎಂದು ಹೇಳಿದನು. ಆಗ ಯಾಜಕರು ಸಿಪಾಯಿಗಳಿಗೆ, “ಅತಲ್ಯಳನ್ನು ದೇವಾಲಯದೊಳಗೆ ಕೊಲ್ಲಬೇಡಿ” ಎಂದು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:14
7 ತಿಳಿವುಗಳ ಹೋಲಿಕೆ  

ದೇವರು ಅವರಿಗೆ, “ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿರಿ, ಹೊರಡಿರಿ,” ಎಂದು ಹೇಳಿದರು. ಆಗ ಅವರು ಹೊರಟು ನಗರದಲ್ಲಿದ್ದವರನ್ನು ಕೊಂದರು.


ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.


ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಯಾವನಾದರೂ ನಿಮ್ಮ ಸಾಲುಗಳಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಆದರೆ ಅರಸನು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಆಜ್ಞಾಪಿಸಿದನು.


ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ, ಯೇಹುವು ಕಾವಲುಗಾರರಿಗೂ, ಅಧಿಪತಿಗಳಿಗೂ, “ನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ,” ಎಂದನು. ಹಾಗೆಯೇ ಅವರು ಒಳಗೆ ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿ ಅವರ ಶವಗಳನ್ನು ಹೊರಗೆ ಹಾಕಿದ ತರುವಾಯ, ಬಾಳನ ಗರ್ಭಗುಡಿಯನ್ನು ಪ್ರವೇಶಿಸಿ,


ಆದರೆ ಒಬ್ಬನು ಮತ್ತೊಬ್ಬನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಬಲಿಪೀಠದಿಂದ ದೂರ ತೆಗೆದುಕೊಂಡುಹೋಗಿ ಕೊಂದುಹಾಕಬೇಕು.


ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.


ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಅರಮನೆಯ ಬಳಿಯಲ್ಲಿ ಕುದುರೆ ಬಾಗಿಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು