Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:17 - ಕನ್ನಡ ಸಮಕಾಲಿಕ ಅನುವಾದ

17 ಸಮಸ್ತ ಜನರು ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತರುವಾಯ ಜನರೆಲ್ಲರೂ ಬಾಳ್‍ದೇವಸ್ಥಾನಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಮುಂದೆಯೇ ಕೊಂದರು; ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗೂ ವಿಗ್ರಹಗಳನ್ನೂ ಹಾಳುಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತರುವಾಯ ಜನರೆಲ್ಲರೂ ಬಾಳ್‍ದೇವಸ್ಥಾನಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಮುಂದೆಯೇ ಕೊಂದು ದೇವಸ್ಥಾನವನ್ನೂ ಅದರಲ್ಲಿದ್ದ ವೇದಿವಿಗ್ರಹಗಳನ್ನೂ ಹಾಳುಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಜನರೆಲ್ಲರು ಬಾಳನ ಗುಡಿಯೊಳಗೆ ನುಗ್ಗಿ ಅದನ್ನು ಹಾಳು ಮಾಡಿದರು. ಅದರ ಯಜ್ಞವೇದಿಕೆಗಳನ್ನೂ ವಿಗ್ರಹಗಳನ್ನೂ ಪುಡಿಪುಡಿ ಮಾಡಿದರು. ಬಾಳನ ಅರ್ಚಕನಾದ ಮತ್ತಾನನನ್ನು ಬಾಳನ ವೇದಿಕೆಯ ಮುಂದೆಯೇ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:17
10 ತಿಳಿವುಗಳ ಹೋಲಿಕೆ  

ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.


ವಿಗ್ರಹಗಳು ಸಂಪೂರ್ಣವಾಗಿ ಹೋಗಿಬಿಡುವುವು.


ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.


ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,


ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.


ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ, ಅವರ ಕಲ್ಲುಸ್ತಂಭಗಳನ್ನು ಒಡೆದು, ಅವರ ಆಶೇರ್ ಸ್ತಂಭಗಳನ್ನು ಬೆಂಕಿಯಿಂದ ಸುಟ್ಟು, ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ, ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ತೆಗೆದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು