2 ಪೂರ್ವಕಾಲ ವೃತ್ತಾಂತ 24:17 - ಕನ್ನಡ ಸಮಕಾಲಿಕ ಅನುವಾದ17 ಯೆಹೋಯಾದಾವನ ಮರಣದ ತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯೆಹೋಯಾದನು ಮೃತನಾದ ಮೇಲೆ, ಜುದೇಯದ ಪದಾಧಿಕಾರಿಗಳು ಅರಸ ಯೆಹೋವಾಷನ ಬಳಿಗೆ ಬಂದು, ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋಯಾದನು ಮೃತನಾದ ಮೇಲೆ ಯೆಹೂದಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋಯಾದನು ಸತ್ತ ಬಳಿಕ ಯೆಹೂದದೇಶದ ಪ್ರಮುಖರು ಅರಸನಾದ ಯೆಹೋವಾಷನ ಬಳಿಗೆ ಬಂದು ನಮಸ್ಕರಿಸಿದರು. ಅರಸನು ಅವರ ಮಾತುಗಳನ್ನು ಕೇಳಿದನು. ಅಧ್ಯಾಯವನ್ನು ನೋಡಿ |
ಆಗ ಯೆಹೂದದ ಅರಸನಾದ ಯೋವಾಷನು ತನ್ನ ಪೂರ್ವಜರಾದ ಯೆಹೋಷಾಫಾಟ, ಯೆಹೋರಾಮ್, ಅಹಜ್ಯ ಎಂಬ ಯೆಹೂದದ ಅರಸರು ಅರ್ಪಿಸಿದ ಸಮಸ್ತ ಪ್ರತಿಷ್ಠಿತವಾದವುಗಳನ್ನೂ ತಾನೇ ಸ್ವತಃ ಅರ್ಪಿಸಿದ ಪ್ರತಿಷ್ಠಿತವಾದವುಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸದಲ್ಲಿಯೂ, ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತೆಗೆದುಕೊಂಡು ಅರಾಮಿನ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.