Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:22 - ಕನ್ನಡ ಸಮಕಾಲಿಕ ಅನುವಾದ

22 ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇವನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗುಂಟಾದ ಕೃಪೆಯನ್ನು ನೆನಪುಮಾಡಿಕೊಳ್ಳದೆ ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ - ಯೆಹೋವನೇ ನೋಡಿ ವಿಚಾರಿಸಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವಾಷನು ಯೆಹೋಯಾದನ ಉಪಕಾರವನ್ನು ನೆನಸಲಿಲ್ಲ. ಯೆಹೋಯಾದನು ಜೆಕರ್ಯನ ತಂದೆ. ಯೆಹೋಯಾದನ ಮಗನನ್ನು ಯೆಹೋವಾಷನು ಕೊಂದನು. ಜೆಕರ್ಯನು ಸಾಯುವಾಗ, ಹೇಳಿದ್ದೇನೆಂದರೆ, “ನೀನು ಮಾಡುತ್ತಿರುವದನ್ನು ಯೆಹೋವನೇ ನೋಡಿ ನ್ಯಾಯ ತೀರಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:22
19 ತಿಳಿವುಗಳ ಹೋಲಿಕೆ  

ನಿಮ್ಮ ರಕ್ತ ಸುರಿಸಿ, ಪ್ರಾಣ ತೆಗೆಯುವವರಿಗೆ, ಮುಯ್ಯಿತೀರಿಸುವೆನು, ಮೃಗವಾಗಿದ್ದರೆ ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಇನ್ನೊಬ್ಬ ಮನುಷ್ಯನಾದುದರಿಂದ ಹತಿಸಿದವನಿಗೂ ಮುಯ್ಯಿತೀರಿಸುವೆನು.


ಹೇಬೆಲನ ರಕ್ತ ಮೊದಲುಗೊಂಡು ಬಲಿಪೀಠಕ್ಕೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು. ಹೌದು, ಈ ಸಂತತಿಯವರೇ ಇದಕ್ಕೆಲ್ಲಾ ಉತ್ತರಕೊಡಬೇಕೆಂದು, ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.


ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.


ಏಕೆಂದರೆ ವಿನಾಶ ಮಾಡುವವನು ಅದರ ಮೇಲೆ ಅಂದರೆ ಬಾಬಿಲೋನಿನ ಮೇಲೆಯೇ ಬಂದಿದ್ದಾನೆ. ಅದರ ಪರಾಕ್ರಮಶಾಲಿಗಳು ಸೆರೆಯಾಗಿಬಿಟ್ಟಿದ್ದಾರೆ. ಅವಳ ಬಿಲ್ಲುಗಳು ಮುರಿದುಹೋಗಿವೆ. ಏಕೆಂದರೆ ಪ್ರತಿದಂಡನೆಗಳ ದೇವರಾದ ಯೆಹೋವ ದೇವರು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವರು.


ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.


ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ.


ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ; ಆದರೆ ನಾನು ಪ್ರಾರ್ಥನೆಯ ಮನುಷ್ಯನು.


ಆಗ ರೂಬೇನನು ಅವರಿಗೆ ಉತ್ತರವಾಗಿ, “ಹುಡುಗನಿಗೆ ಏನೂ ಕೇಡು ಮಾಡಬೇಡಿರಿ, ಎಂದು ನಾನು ನಿಮಗೆ ಹೇಳಿದರೂ ನೀವು ಕೇಳಲಿಲ್ಲ. ಆದ್ದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ಈಗ ನಾವು ಲೆಕ್ಕ ಒಪ್ಪಿಸುತ್ತಿದ್ದೇವೆ,” ಎಂದನು.


ನಾವು ಯೆಹೋವ ದೇವರ ಕಡೆಗೆ ತಿರುಗಿಕೊಂಡು ದಹನಬಲಿಗಳನ್ನಾದರೂ, ಧಾನ್ಯ ಸಮರ್ಪಣೆಯನ್ನಾದರೂ, ಸಮಾಧಾನದ ಸಮರ್ಪಣೆಗಳನ್ನಾದರೂ, ಅದರ ಮೇಲೆ ಅರ್ಪಿಸುವುದಕ್ಕೋಸ್ಕರ ಬಲಿಪೀಠವನ್ನು ನಮಗಾಗಿ ಕಟ್ಟಿದ್ದರೆ, ಯೆಹೋವ ದೇವರು ಅದನ್ನು ವಿಚಾರಿಸಲಿ.


ಗಿದ್ಯೋನನೆಂಬ ಯೆರುಬ್ಬಾಳನು ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ದಯೆಯನ್ನು ಅವನ ಮನೆಗೆ ಮಾಡದೆ ಹೋದರು.


ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು