Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:25 - ಕನ್ನಡ ಸಮಕಾಲಿಕ ಅನುವಾದ

25 ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇವರು ಅವನನ್ನು ಬಿಟ್ಟುಹೋದಕೂಡಲೆ ಅವನ ಸೇವಕರು ಯಾಜಕನಾದ ಯೆಹೋಯಾದನ ಮಗನ ವಧೆಯ ನಿವಿುತ್ತ ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಕಠಿನ ರೋಗದಲ್ಲಿದ್ದ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಶ್ಮಶಾನದಲ್ಲಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕೆಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:25
15 ತಿಳಿವುಗಳ ಹೋಲಿಕೆ  

ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.


ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.


ಆದ್ದರಿಂದ ಅವನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಜರ್ಯನು ಅವನನ್ನು ನೋಡಲು ಹೋದನು.


ಇದಲ್ಲದೆ ಕೂಷ್ಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಯೆಹೋವ ದೇವರು ಎಬ್ಬಿಸಿದರು.


ಯೋವಾಷನಿಗೆ ವಿರೋಧವಾಗಿ ಒಳಸಂಚು ಮಾಡಿದವರು ಯಾರೆಂದರೆ, ಅಮ್ಮೋನ್ ದೇಶದ ಶಿಮೆಯಾತ್ ಎಂಬಾಕೆಯ ಮಗ ಜಾಬಾದ್; ಮೋವಾಬ್ ದೇಶದ ಶಿಮ್ರೀತ್ ಎಂಬಾಕೆಯ ಮಗ ಯೆಹೋಜಾಬಾದನು.


ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು.


ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.


ಅವನು ರಾಜ್ಯವನ್ನು ಸ್ಥಿರಪಡಿಸಿಕೊಂಡ ತರುವಾಯ, ಅರಸನಾಗಿದ್ದ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆಯನ್ನು ವಿಧಿಸಿದನು.


ಅಮಚ್ಯನು ಯೆಹೋವ ದೇವರ ಕಡೆಯಿಂದ ತೊಲಗಿಹೋದ ತರುವಾಯ, ಯೆರೂಸಲೇಮಿನವರು ಅವನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು