Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:12 - ಕನ್ನಡ ಸಮಕಾಲಿಕ ಅನುವಾದ

12 ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದ್ಯರು ಸೆರೆಯಾಗಿ ಒಯ್ದು, ಬಂಡೆಯ ಶಿಖರಕ್ಕೆ ಅವರನ್ನು ಕರೆದುಕೊಂಡು ಹೋಗಿ, ಅಲ್ಲಿಂದ ಅವರನ್ನು ದಬ್ಬಿ ಸಾಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರು ಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೆಹೂದ್ಯರು ಬೇರೆ ಹತ್ತು ಸಾವಿರಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರುಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು ಕಡಿದಾದ ಬಂಡೆಯ ತುದಿಗೆ ಒಯ್ದು ಅವರೆಲ್ಲರೂ ಚೂರುಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದದ ಸೈನಿಕರು ಸೇಯೀರಿನ ಹತ್ತುಸಾವಿರ ಮಂದಿಯನ್ನು ಸೆರೆಹಿಡಿದರು. ಅವರನ್ನು ಒಂದು ಕಡಿದಾದ ಬೆಟ್ಟದ ಬದಿಗೊಯ್ದು ಅಲ್ಲಿಂದ ಅವರನ್ನು ಕೆಳಕ್ಕೆ ದೂಡಿದರು. ಅವರು ಕೆಳಗೆ ಬಂಡೆಗೆ ಅಪ್ಪಳಿಸಿದಾಗ ಅವರ ದೇಹಗಳು ಚೂರುಚೂರಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:12
8 ತಿಳಿವುಗಳ ಹೋಲಿಕೆ  

“ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು.


ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.


ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.


ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡೆಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ, ಅಲ್ಲಿ ಸೇಯೀರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.


ತಮ್ಮ ಸಂಗಡ ಯುದ್ಧಕ್ಕೆ ಬಾರದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ದಾಳಿಮಾಡಿ, ಸಮಾರ್ಯ ಮೊದಲುಗೊಂಡು ಬೇತ್ ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಕೊಂದು, ಬಹು ಕೊಳ್ಳೆಯನ್ನು ತೆಗೆದುಕೊಂಡು ಹೋದರು.


ಆದಕಾರಣ ಯೆಹೋವ ದೇವರ ಕೋಪವು ಅಮಚ್ಯನ ಮೇಲೆ ಬಂತು. ದೇವರು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿದರು. ಪ್ರವಾದಿಯು ಅರಸನಿಗೆ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆ ಹೋದ ದೇವರುಗಳನ್ನು ನೀನು ವಿಚಾರಿಸುವುದೇನು?” ಎಂದನು.


ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ ಅವರು ನನ್ನ ಮಾತು ಕೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು