Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:23 - ಕನ್ನಡ ಸಮಕಾಲಿಕ ಅನುವಾದ

23 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಊರಿನ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು, ಮೂಲೆಯ ಬಾಗಿಲವರೆಗೂ, 180 ಮೀಟರ್ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲರ ಅರಸ ಯೋವಾಷನು, ಯೆಹೋವಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆಹಿಡಿದನು. ಅವನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ಗೋಡೆಯನ್ನು ಸುಮಾರು ಇನ್ನೂರು ಮೀಟರಿನಷ್ಟು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡು ಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋವಾಷನು ಬೇತ್ಷೆಮೆಷಿನಲ್ಲಿ ಅಮಚ್ಯನನ್ನು ಹಿಡಿದು ಜೆರುಸಲೇಮಿಗೆ ಕೊಂಡೊಯ್ದನು. ಅಮಚ್ಯನ ತಂದೆ ಯೆಹೋವಾಷನು. ಇವನು ಯೆಹೋವಹಾಜನ ಮಗ. ಯೋವಾಷನು ಜೆರುಸಲೇಮಿನ ಪೌಳಿಗೋಡೆಯಲ್ಲಿ ಆರುನೂರು ಅಡಿ ಗೋಡೆಯನ್ನು ಅಂದರೆ ಎಫ್ರಾಯೀಮ್ ಬಾಗಿಲಿನಿಂದ ಹಿಡಿದು ಮೂಲೆಬಾಗಿಲಿನವರೆಗೆ ಗೋಡೆಯನ್ನು ಕೆಡವಿಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:23
18 ತಿಳಿವುಗಳ ಹೋಲಿಕೆ  

ಹಾಗೆಯೇ ಜನರು ಹೊರಟುಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ಅವರವರು ತಮ್ಮ ಮನೆಗಳ ಮೇಲೆಯೂ, ತಮ್ಮ ಅಂಗಳಗಳಲ್ಲಿಯೂ, ದೇವರ ಮನೆಯ ಅಂಗಳಗಳಲ್ಲಿಯೂ, ನೀರು ಬಾಗಿಲ ಬೀದಿಗಳಲ್ಲಿಯೂ, ಎಫ್ರಾಯೀಮನ ಬಾಗಿಲ ಬೀದಿಗಳಲ್ಲಿಯೂ ತಮಗೆ ಪರ್ಣಶಾಲೆಗಳನ್ನು ಹಾಕಿದರು.


ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ನುಗ್ಗಿ, ಅರಸನ ಅರಮನೆಯಲ್ಲಿ ಸಿಕ್ಕಿದ ಸಮಸ್ತ ಸ್ಥಿತಿಯನ್ನೂ, ಅವನ ಪುತ್ರರನ್ನೂ, ಅವನ ಹೆಂಡತಿಯರನ್ನೂ ತೆಗೆದುಕೊಂಡು ಹೋದರು. ಆದ್ದರಿಂದ ಅವನ ಪುತ್ರರಲ್ಲಿ ಚಿಕ್ಕವನಾದ ಯೆಹೋವಾಹಾಜನ ಹೊರತು ಅವನಿಗೆ ಪುತ್ರರು ಯಾರೂ ಉಳಿಯಲಿಲ್ಲ.


ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ಹನನೇಲನ ಬುರುಜು ಮೊದಲುಗೊಂಡು ಮೂಲೆಯ ಬಾಗಿಲಿನವರೆಗೂ ಪಟ್ಟಣವು ಕರ್ತರಿಗೆ ಕಟ್ಟಲಾಗುವ ದಿನಗಳು ಬರಲಿದೆ.


ಎಫ್ರಾಯೀಮ್ ಬಾಗಿಲ ಮೇಲೆಯೂ, ಯೆಷಾನಾ ಬಾಗಿಲ ಮೇಲೆಯೂ, ಮೀನು ಬಾಗಿಲ ಮೇಲೆಯೂ ಹಾದು, ಹನನೇಲ್ ಗೋಪುರವನ್ನೂ, ಶತ ಗೋಪುರವನ್ನೂ ದಾಟಿ, ಕುರಿ ಬಾಗಿಲವರೆಗೆ ಬಂದು ಸೆರೆಮನೆಯ ಬಾಗಿಲ ಬಳಿಯಲ್ಲಿ ನಿಂತರು.


ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಿಲ ಬಳಿಯಲ್ಲಿಯೂ, ತಗ್ಗಿನ ಬಾಗಿಲ ಬಳಿಯಲ್ಲಿಯೂ, ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು.


ಯೆರೂಸಲೇಮಿನ ನಿವಾಸಿಗಳು ಯೆಹೋರಾಮನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯನನ್ನು ಅರಸನಾಗಿ ಮಾಡಿದರು. ಏಕೆಂದರೆ ಪಾಳೆಯಕ್ಕೆ ಬಂದ ಅರಬಿಯರ ಗುಂಪು ಹಿರಿಯ ಮಕ್ಕಳನ್ನೆಲ್ಲಾ ಕೊಂದುಹಾಕಿದರು. ಹೀಗೆಯೇ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಲು ಆರಂಭಿಸಿದನು.


ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.


ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.


ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬಿಲೋನಿಗೆ ಒಯ್ಯುವುದಕ್ಕಾಗಿ ಅವನಿಗೆ ಕಂಚಿನ ಸಂಕೋಲೆಗಳನ್ನು ಹಾಕಿಸಿದನು.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಆದ್ದರಿಂದ ಅವನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಜರ್ಯನು ಅವನನ್ನು ನೋಡಲು ಹೋದನು.


ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು ಮೂಲೆಯ ಬಾಗಿಲವರೆಗೂ, ಆರುನೂರು ಅಡಿ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.


ಯೆಹೂದದವರು ಇಸ್ರಾಯೇಲರ ಮುಂದೆ ಸೋತುಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಓಡಿಹೋದರು.


ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು, ಬಿದ್ದುಹೋಗಿದ್ದ ಗೋಡೆಯನ್ನೆಲ್ಲಾ ಕಟ್ಟಿಸಿ, ಗೋಪುರಗಳ ಪರ್ಯಂತರ ಅದನ್ನು ಎತ್ತರಮಾಡಿ, ಅದರ ಹೊರಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ, ದಾವೀದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತಿ ಮಾಡಿ ಈಟಿಗಳನ್ನೂ, ಗುರಾಣಿಗಳನ್ನೂ ಬಹಳವಾಗಿ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು