Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:7 - ಕನ್ನಡ ಸಮಕಾಲಿಕ ಅನುವಾದ

7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದಿರಲಿ. ಏಕೆಂದರೆ ಯೆಹೋವ ದೇವರು ಇಸ್ರಾಯೇಲರಾದ ಎಫ್ರಾಯೀಮನ ಸಮಸ್ತ ಜನರ ಸಂಗಡ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ದೈವಪುರುಷನೊಬ್ಬನು ಅವನ ಬಳಿಗೆ ಬಂದು, “ಅರಸರೇ, ಇಸ್ರಯೇಲ್ ಸೈನ್ಯದವರು ನಿಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಸರ್ವೇಶ್ವರ ಎಫ್ರಯಿಮರಾದ ಇಸ್ರಯೇಲರನ್ನೆಲ್ಲಾ ಕೈಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ - ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲ್ಯರನ್ನೆಲ್ಲಾ ಕೈಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಒಬ್ಬ ದೇವರ ಮನುಷ್ಯನು ಅಮಚ್ಯನ ಬಳಿಗೆ ಬಂದು, “ಅರಸನೇ, ಇಸ್ರೇಲಿನ ಸೈನಿಕರು ನಿನ್ನೊಂದಿಗೆ ಯುದ್ಧಕ್ಕೆ ಹೋಗಲು ಬಿಡಬೇಡ. ಯೆಹೋವನು ಇಸ್ರೇಲರೊಂದಿಗೂ ಎಫ್ರಾಯೀಮಿನ ಜನರೊಂದಿಗೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:7
12 ತಿಳಿವುಗಳ ಹೋಲಿಕೆ  

ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.


ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ಎಫ್ರಾಯೀಮ್ ಟೈರ್‌ನಂತಹ ಸುಂದರವಾದ ಸ್ಥಳದಲ್ಲಿ ನೆಡುವುದನ್ನು ನಾನು ಕಂಡೆನು. ಆದರೆ ಎಫ್ರಾಯೀಮ್ ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.”


ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.


ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


ಯೆಹೋವ ದೇವರು ದಾವೀದನ ಬಳಿಗೆ ನಾತಾನನನ್ನು ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಅವನಿಗೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.


ಆದ್ದರಿಂದ ಅವಳು ತನ್ನ ಗಂಡನಿಗೆ, “ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದುಹೋಗುವ ಇವನು ದೇವರ ಪರಿಶುದ್ಧ ಮನುಷ್ಯನಾಗಿರುತ್ತಾನೆಂದು ನನಗೆ ಗೊತ್ತಾಯಿತು.


ಇದಲ್ಲದೆ ಇಸ್ರಾಯೇಲಿನವರಿಗೆ 3,400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟು, ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು