Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:10 - ಕನ್ನಡ ಸಮಕಾಲಿಕ ಅನುವಾದ

10 ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನಿಗೆ ಇಳಕಲಿನ ಪ್ರದೇಶದಲ್ಲಿಯೂ ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳಿದ್ದದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದದರಿಂದ ಗುಡ್ಡ, ಫಲವತ್ತಾದ ಬೈಲು ಇವುಗಳಲ್ಲಿ ಹೊಲ ದ್ರಾಕ್ಷೇತೋಟಗಳ ಕೆಲಸಮಾಡುವವರನ್ನು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:10
13 ತಿಳಿವುಗಳ ಹೋಲಿಕೆ  

ಆದರೂ ಇನ್ನು ಸ್ವಲ್ಪಕಾಲದಲ್ಲಿ ಲೆಬನೋನ್ ಫಲವುಳ್ಳ ಹೊಲವಾಗಿದ್ದು, ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವುದಿಲ್ಲವೋ?


ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿದ್ದೀ, “ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ, ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ, ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಗಡಿಸ್ಥಳಗಳಲ್ಲಿಯೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.


ಮೋವಾಬಿನ ಅರಸನಾದ ಮೇಷನು ಕುರಿ ಮಂದೆಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ, ಒಂದು ಲಕ್ಷ ಟಗರುಗಳ ಉಣ್ಣೆಯನ್ನೂ ಕಪ್ಪವಾಗಿ ಕೊಡುತ್ತಿದ್ದನು.


ಬಯಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಎಲ್ಲಾ ಗಿಲ್ಯಾದನ್ನೂ ಬಾಷಾನಿನಲ್ಲಿ ಓಗನ ರಾಜ್ಯದಲ್ಲಿ ಪಟ್ಟಣಗಳಾದ ಸಲ್ಕಾ ಎದ್ರೈವರೆಗೆ ಎಲ್ಲಾ ಬಾಷಾನನ್ನೂ ಸ್ವಾಧೀನಮಾಡಿಕೊಂಡೆವು.


ಇದಲ್ಲದೆ ಲೇಖಕನಾದ ಯೆಹೀಯೇಲನ ಕೈಯಿಂದಲೂ, ಅಧಿಪತಿಯಾದ ಮಾಸೇಯನ ಕೈಯಿಂದ ಬರೆದಿರುವ ಲೆಕ್ಕದ ಪ್ರಕಾರ, ಗುಂಪುಗುಂಪಾಗಿ ಯುದ್ಧಕ್ಕೆ ಹೋಗುವ ಯುದ್ಧವೀರರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.


ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ಸಮುಯೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಅವನಿಗೆ ಹೀಗೆ ಹೇಳಲಾಗಿತ್ತು, “ಸೌಲನು ತನ್ನ ನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲು ಕರ್ಮೆಲಿಗೆ ಹೋಗಿದ್ದಾನೆ. ನಂತರ ಅಲ್ಲಿಂದ ಮುಂದೆ ಹೋಗಿ ಗಿಲ್ಗಾಲಿಗೆ ಹೋಗಿದ್ದಾನೆ.”


ಯೆಹೋಷಾಫಾಟನು ಬರಬರುತ್ತಾ ಬಹಳ ಅಭಿವೃದ್ಧಿಯಾಗಿ ಯೆಹೂದದಲ್ಲಿ ಅರಮನೆಗಳನ್ನೂ, ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.


ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ದವಸ ಧಾನ್ಯಗಳ ದೊಡ್ಡ ಮಳಿಗೆಯನ್ನು ಕಟ್ಟಿದನು. ಪರಾಕ್ರಮಶಾಲಿಗಳಾದ ಯುದ್ಧವೀರರು ಯೆರೂಸಲೇಮಿನಲ್ಲಿದ್ದರು.


ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು.


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು