Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:21 - ಕನ್ನಡ ಸಮಕಾಲಿಕ ಅನುವಾದ

21 ಅರಸನಾದ ಉಜ್ಜೀಯನು ಮರಣದ ದಿವಸದವರೆಗೂ ಕುಷ್ಠರೋಗಿಯಾಗಿದ್ದು ಯೆಹೋವ ದೇವರ ಆಲಯದಿಂದ ಬಹಿಷ್ಕೃತನಾದನು. ಅವನು ಕುಷ್ಠರೋಗದ ನಿಮಿತ್ತ ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅವನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೊಗಿಯಾಗಿದ್ದು, ಸರ್ವೇಶ್ವರನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಕುಷ್ಠದ ನಿಮಿತ್ತ ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೋಗಿಯಾಗಿದ್ದು ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜ ಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅರಸನಾದ ಉಜ್ಜೀಯನು ಕುಷ್ಠರೋಗಿಯಾದುದರಿಂದ ಅವನು ಯೆಹೋವನ ಆಲಯವನ್ನು ಪ್ರವೇಶಿಸಲಾಗಲಿಲ್ಲ. ಅವನು ದೂರದಲ್ಲಿದ್ದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಿದನು. ಅವನ ಮಗನಾದ ಯೋತಾಮನು ಪ್ರಜಾಪಾಲನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:21
9 ತಿಳಿವುಗಳ ಹೋಲಿಕೆ  

ಆ ವ್ಯಾಧಿ ಅವನಲ್ಲಿ ಇರುವಷ್ಟು ದಿನಗಳೂ ಅವನು ಅಶುದ್ಧನಾಗಿರುವನು. ಅವನು ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.


ಆಗ ಊರು ಬಾಗಿಲ ದ್ವಾರದಲ್ಲಿ ನಾಲ್ಕು ಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರು, “ನಾವು ಸಾಯುವವರೆಗೂ ಇಲ್ಲಿ ಕುಳಿತುಕೊಂಡಿರುವುದೇನು?


ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿ ಇಟ್ಟರು. ಮಿರ್ಯಾಮಳು ತಿರುಗಿ ಒಳಗೆ ಬರುವವರೆಗೆ ಜನರು ಪ್ರಯಾಣ ಮಾಡಲಿಲ್ಲ.


“ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು.


ಆಗ ಮುಖ್ಯಯಾಜಕನಾದ ಅಜರ್ಯನೂ, ಯಾಜಕರೆಲ್ಲರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದದ್ದರಿಂದ ಅವರು ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಹಾಕಿದರು. ಯೆಹೋವ ದೇವರು ತನ್ನನ್ನು ಬಾಧಿಸಿದ್ದರಿಂದ ಅವನು ಸ್ವತಃ ಹೊರಗೆ ಹೋಗಲು ತ್ವರೆಪಟ್ಟನು.


ಆಗ ಇಸ್ರಾಯೇಲರು ಹಾಗೆ ಮಾಡಿ, ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರ ಇಸ್ರಾಯೇಲರು ಮಾಡಿದರು.


ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಅವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು