Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:3 - ಕನ್ನಡ ಸಮಕಾಲಿಕ ಅನುವಾದ

3 ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವ ದೇವರ ಆಲಯದ ಬಾಗಿಲುಗಳನ್ನು ತೆರೆದು, ಅವುಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸರ್ವೇಶ್ವರನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ತನ್ನ ಆಳಿಕೆಯ ಮೊದಲನೆಯ ವರುಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹಿಜ್ಕೀಯನು ದೇವಾಲಯದ ಬಾಗಿಲುಗಳನ್ನು ದುರಸ್ತಿಮಾಡಿ ಭದ್ರಪಡಿಸಿದನು; ತನ್ನ ಆಳ್ವಿಕೆಯ ಮೊದಲನೇ ವರ್ಷದ ಮೊದಲಿನ ತಿಂಗಳಿನಲ್ಲಿಯೇ ದೇವಾಲಯವನ್ನು ಮತ್ತೆ ತೆರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:3
11 ತಿಳಿವುಗಳ ಹೋಲಿಕೆ  

ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.


ಇದಲ್ಲದೆ ಅವರು ದ್ವಾರಾಂಗಳದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ಆರಿಸಿ, ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿಸದೆ ಹೋದರು.


ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನಾನು ಕೆಟ್ಟ ಕಾರ್ಯವನ್ನು ನನ್ನ ಕಣ್ಣುಗಳ ಮುಂದೆ ಒಪ್ಪಿಗೆಯಿಂದ ನೋಡುವುದಿಲ್ಲ. ಅವಿಶ್ವಾಸಿಗಳು ಮಾಡುವುದನ್ನು ದ್ವೇಷಿಸುವೆನು; ಅದರಲ್ಲಿ ನಾನು ಭಾಗವಹಿಸುವುದಿಲ್ಲ.


ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.


ಇದಲ್ಲದೆ ಹಿಜ್ಕೀಯನು ಯಾಜಕರನ್ನೂ, ಲೇವಿಯರನ್ನೂ ಕರೆಕಳುಹಿಸಿ, ಅವರನ್ನು ಪೂರ್ವದಿಕ್ಕಿನ ಅಂಗಣದಲ್ಲಿ ಕೂಡಿಸಿಕೊಂಡು, ಅವರಿಗೆ ಹೇಳಿದ್ದೇನೆಂದರೆ,


ಅವರು ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಪ್ರತಿಷ್ಠೆ ಮಾಡಲು ಆರಂಭಿಸಿ, ಆ ತಿಂಗಳ ಎಂಟನೆಯ ದಿವಸದಲ್ಲಿ ಯೆಹೋವ ದೇವರ ದ್ವಾರಾಂಗಳದವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದನ್ನು ಮೊದಲನೆಯ ತಿಂಗಳಿನ ಹದಿನಾರನೆಯ ದಿವಸದಲ್ಲಿ ಮುಗಿಸಿದರು.


“ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು