Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:36 - ಕನ್ನಡ ಸಮಕಾಲಿಕ ಅನುವಾದ

36 ಆಗ ದೇವರು ತಮ್ಮ ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ, ಜನರೆಲ್ಲರೂ ಸಂತೋಷಪಟ್ಟರು. ಏಕೆಂದರೆ ಈ ಕಾರ್ಯವು ತ್ವರೆಯಾಗಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಹೀಗೆ ಸರ್ವೇಶ್ವರನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ಯಾರೂ ಗಮನಿಸುವುದಕ್ಕೆ ಮುಂಚೆಯೇ, ದೇವರು ತಾವೇ ತಮ್ಮ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲ ಜನರೂ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃಸ್ಥಾಪಿತವಾಯಿತು. ಯಾರೂ ನೆನಸದೆ ಇರುವಲ್ಲಿ ದೇವರು ತಾನೇ ತನ್ನ ಪ್ರಜೆಗಳಿಗೋಸ್ಕರ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲಾ ಜನರೂ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಕೀಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:36
10 ತಿಳಿವುಗಳ ಹೋಲಿಕೆ  

ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.


ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು, ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು.


ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.


ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.


ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ, ಜನರು ಸಂತೋಷಪಟ್ಟರು. ಏಕೆಂದರೆ ಅವರು ಪೂರ್ಣಮನಸ್ಸಿನಿಂದ ಮನಃಪೂರ್ವಕವಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷಪಟ್ಟನು.


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ಇದಲ್ಲದೆ ದಹನಬಲಿಗಳೂ, ಸಮಾಧಾನದ ಬಲಿಗಳ ಕೊಬ್ಬೂ, ದಹನಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳವಾಗಿದ್ದವು. ಹೀಗೆ ಯೆಹೋವ ದೇವರ ಆಲಯದ ಸೇವೆಯು ಸಿದ್ಧವಾಯಿತು.


ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು