Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:6 - ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನಮ್ಮ ಪಿತೃಗಳು ಅಪನಂಬಿಗಸ್ತರಾಗಿ, ನಮ್ಮ ದೇವರಾದ ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ, ಅವರನ್ನು ಬಿಟ್ಟುಬಿಟ್ಟರು. ಇದಲ್ಲದೆ ಅವರು ಯೆಹೋವ ದೇವರ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ, ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ಪೂರ್ವಜರು ನಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಮಾಡಿ ಅವರ ಚಿತ್ತಕ್ಕೆ ವಿರುದ್ಧ ನಡೆದು ಅವರನ್ನು ತೊರೆದುಬಿಟ್ಟರು; ಅವರ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಮ್ಮ ಪಿತೃಗಳು ನಮ್ಮ ದೇವರಾದ ಯೆಹೋವನಿಗೆ ದ್ರೋಹ ಮಾಡಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ಬಿಟ್ಟರು. ಅವರು ಆತನ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಮ್ಮ ಪೂರ್ವಿಕರು ಯೆಹೋವನನ್ನು ತೊರೆದು ಆತನ ದೃಷ್ಟಿಯಲ್ಲಿ ಪಾಪಮಾಡಿದರು; ಆತನ ಆಲಯಕ್ಕೆ ವಿಮುಖರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:6
21 ತಿಳಿವುಗಳ ಹೋಲಿಕೆ  

ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು.


ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ನಮ್ಮ ತಂದೆಗಳು ಪಾಪಮಾಡಿ ಇಲ್ಲವಾದರು. ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.


“ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ?


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


“ಆದರೆ ನಮ್ಮ ಪಿತೃಗಳು ಗರ್ವಪಟ್ಟು ನಡೆದು, ಹಟಮಾರಿಗಳೂ, ಕಠಿಣರೂ ಆಗಿ ನಿಮ್ಮ ಆಜ್ಞೆಗಳಿಗೆ ಅವಿಧೇಯರಾದರು.


ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ.


ಆದರೆ ನಮ್ಮ ಪಿತೃಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ಕಾರಣ, ದೇವರು ಅವರನ್ನು ಬಾಬಿಲೋನಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆ ಅರಸನು ಆ ಆಲಯವನ್ನು ಹಾಳು ಮಾಡಿ, ಜನರನ್ನು ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದನು.


“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.


ಕೃಪೆಮಾಡಿ ನನಗೆ ಕಿವಿಗೊಡಿರಿ, ಕಟಾಕ್ಷಿಸಿ ನೋಡಿರಿ, ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿರಿ. ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಾಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ. ಅವರು ನಿಮಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ. ನಾನೂ, ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.


“ಒಂದು ವೇಳೆ ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಆಲೋಚಿಸಿ, ಇಂಥಾ ಕಾರ್ಯಗಳನ್ನು ನಡೆಸದೆ,


ನಮ್ಮ ಅರಸರೂ, ನಮ್ಮ ಪ್ರಧಾನರೂ, ನಮ್ಮ ಯಾಜಕರೂ, ನಮ್ಮ ಪಿತೃಗಳೂ ನಿಮ್ಮ ನಿಯಮವನ್ನು ಕೈಗೊಳ್ಳದೆ, ನಿಮ್ಮ ಆಜ್ಞೆಗಳನ್ನೂ, ನೀವು ಅವರಿಗೆ ಎಚ್ಚರಿಸಿದ ನಿಮ್ಮ ಎಚ್ಚರಿಕೆಗಳನ್ನೂ ಕೇಳದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು