Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:15 - ಕನ್ನಡ ಸಮಕಾಲಿಕ ಅನುವಾದ

15 ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನ ಪಾಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ, ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ ನಾಚಿಕೆಪಟ್ಟು, ತಮ್ಮನ್ನು ಶುದ್ಧಪಡಿಸಿಕೊಂಡರು. ಸರ್ವೇಶ್ವರನ ಆಲಯದಲ್ಲಿ ದಹನಬಲಿಗಳನ್ನು ಸಮರ್ಪಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ [ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ] ನಾಚಿಕೆಪಟ್ಟು ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಬಳಿಕ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ದರು. ಯಾಜಕರೂ ಲೇವಿಯರೂ ನಾಚಿಕೆಯಿಂದ ತಮ್ಮನ್ನು ಸೇವೆಗಾಗಿ ಸಿದ್ಧಪಡಿಸಿಕೊಂಡು ಸರ್ವಾಂಗಹೋಮಕ್ಕಾಗಿ ಕಾಣಿಕೆಗಳನ್ನು ಯೆಹೋವನ ಮಂದಿರಕ್ಕೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:15
16 ತಿಳಿವುಗಳ ಹೋಲಿಕೆ  

ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.


ಅವರ ಹೆಂಡತಿಯರಿಗೂ ಚಿಕ್ಕವರಿಗೂ ಪುತ್ರಪುತ್ರಿಯರಿಗೂ ಪಾಲು ಕೊಡುವುದಕ್ಕೂ ಇದ್ದರು. ಏಕೆಂದರೆ ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನೇ ತಾವು ಪರಿಶುದ್ಧಗೊಳಿಸುವಲ್ಲಿ ನಂಬಿಗಸ್ತರಾಗಿದ್ದರು.


ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು.


ಇವರು ಅರಸನ ಆಜ್ಞಾಧಾರಕರಾಗಿ ಯೆಹೋವ ದೇವರ ವಾಕ್ಯವನ್ನು ಅನುಸರಿಸಿ, ತಮ್ಮ ಸಹೋದರರನ್ನು ಕೂಡಿಸಿ, ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯವನ್ನು ಶುಚಿಮಾಡಲು ಬಂದರು.


ಅಲ್ಲಿ ಇದ್ದ ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.


ಯೆಹೋವ ದೇವರ ಸಮೀಪಕ್ಕೆ ಬರುವ ಯಾಜಕರು ಸಹ ಯೆಹೋವ ದೇವರು ಅವರನ್ನು ಸಾಯಿಸದಂತೆ ತಮ್ಮನ್ನು ಶುದ್ಧಿಮಾಡಿಕೊಳ್ಳಲಿ, ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದರು.


ಆಗ ಯೆಹೋವ ದೇವರು ಮೋಶೆಗೆ, “ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಳ್ಳಲಿ.


ಆದರೆ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಆಚರಿಸಲಿ. ಆ ಕುರಿಯನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡ ಕಹಿಯಾದ ಸೊಪ್ಪುಗಳೊಂದಿಗೆ ಊಟಮಾಡಬೇಕು.


ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು.


ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು.


ಯಾಜಕರೂ ಲೇವಿಯರೂ ಕೂಡ ಶುದ್ಧ ಮಾಡಿಕೊಂಡಿದ್ದರು. ಅವರೆಲ್ಲರು ಶುದ್ಧರಾದ ನಂತರ, ಲೇವಿಯರು ಸೆರೆಯಿಂದ ಬಂದವರೆಲ್ಲರಿಗೋಸ್ಕರವೂ, ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಯನ್ನು ವಧಿಸಿದರು.


ಸಭೆಯು ತಂದ ದಹನಬಲಿಗಳ ಲೆಕ್ಕವೇನೆಂದರೆ: ಎಪ್ಪತ್ತು ಹೋರಿಗಳು, ನೂರು ಟಗರುಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಯೆಹೋವ ದೇವರಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.


ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು.


ಪಸ್ಕದ ಕುರಿಮರಿಯನ್ನು ವಧಿಸಿ ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು