Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:17 - ಕನ್ನಡ ಸಮಕಾಲಿಕ ಅನುವಾದ

17 ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜನಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಪಡಿಸಿಕೊಳ್ಳದೆ ಇದ್ದುದರಿಂದ, ಅಶುದ್ಧರಾಗಿದ್ದವರೆಲ್ಲರ ಬಲಿಪಶುಗಳು ಸರ್ವೇಶ್ವರನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು. ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದದರಿಂದ ಅಶುದ್ಧರಾದವರೆಲ್ಲರ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜನಸಮೂಹದವರಲ್ಲಿ ಎಷ್ಟೋ ಮಂದಿ ಪವಿತ್ರ ಸೇವೆಗಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಆದ್ದರಿಂದ ಪಸ್ಕದ ಕುರಿಯನ್ನು ಅವರು ವಧಿಸಲಾಗಲಿಲ್ಲ. ಲೇವಿಯರೇ ಅವರ ಬದಲಾಗಿ ಪಸ್ಕದ ಕುರಿಯನ್ನು ವಧಿಸಿದರು. ಹೀಗೆ ಲೇವಿಯರು ಪ್ರತಿಯೊಂದು ಕುರಿಯನ್ನು ದೇವರಿಗಾಗಿ ಪರಿಶುದ್ಧಗೊಳಿಸಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:17
6 ತಿಳಿವುಗಳ ಹೋಲಿಕೆ  

ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ತರುವಾಯ ಸಂಜೆಯಲ್ಲಿ ಇಸ್ರಾಯೇಲಿನ ಜನಾಂಗದವರೆಲ್ಲರೂ ಅವುಗಳನ್ನು ವಧಿಸಬೇಕು.


ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.


ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿಸುವವರಾಗಿರುವರು. ಆಲಯದ ಬಾಗಿಲುಗಳ ಮೇಲ್ವಿಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು. ಅವರು ಜನರಿಗೋಸ್ಕರ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡಿ ಅವರಿಗೆ ಸೇವೆ ಮಾಡುವ ಹಾಗೆ ಅವರ ಮುಂದೆ ನಿಲ್ಲುವರು.


ಮೋಶೆಯ ಸಂಗಡ ಮಾತನಾಡಿ, “ನಾವು ಮನುಷ್ಯನ ಶವದ ಸೋಂಕಿನಿಂದ ಅಶುದ್ಧರಾಗಿದ್ದೇವೆ. ಆದ್ದರಿಂದ ನಾವು ಇಸ್ರಾಯೇಲರೊಡನೆ ನೇಮಕವಾದ ಸಮಯದಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಲು ನಮಗೆ ಏಕೆ ಅಡ್ಡಿಯಾಗಬೇಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು