Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:19 - ಕನ್ನಡ ಸಮಕಾಲಿಕ ಅನುವಾದ

19 ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜೆರುಸಲೇಮಿನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳ ಜನರ ದೇವತೆಗಳಿಗೆ ಸಮಾನನಾಗಿರುತ್ತಾನೆ, ಎಂಬ ಅರ್ಥದಲ್ಲಿ ಅವರ ಬಗ್ಗೆ ಗಟ್ಟಿಯಾಗಿ ಕೂಗಿ ಹೇಳಿದರು; ಆ ಜನರೊಡನೆ ಹಿಬ್ರುಭಾಷೆಯಲ್ಲೆ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆರೂಸಲೇವಿುನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನೋ ಎಂಬಂತೆ ಆತನ ವಿಷಯದಲ್ಲಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೂದಾಯ ಭಾಷೆಯಲ್ಲಿ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಲೋಕದ ಜನರು ಆರಾಧಿಸಿದ ಮತ್ತು ಕೈಯಾರೆ ಮಾಡಿದ್ದ ದೇವರುಗಳನ್ನು ಜೆರುಸಲೇಮಿನ ದೇವರೊಂದಿಗೆ ಹೋಲಿಸಿ ಆತನ ವಿರುದ್ಧವಾಗಿ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:19
31 ತಿಳಿವುಗಳ ಹೋಲಿಕೆ  

ಅವರ ದೇಶವು ವಿಗ್ರಹಗಳಿಂದ ತುಂಬಿದೆ. ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನು ಆರಾಧಿಸುವರು.


ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


“ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.


ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.


ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ.


ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.


ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.


ಇದರ ನಿಮಿತ್ತ ಅರಸನಾದ ಹಿಜ್ಕೀಯನೂ, ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.


ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಮೂರ್ಖರು ನಿಮ್ಮ ನಾಮವನ್ನು ನಿಂದಿಸುತ್ತಾರೆ. ಶತ್ರುಗಳು ನಿಮ್ಮನ್ನು ಹಾಸ್ಯಮಾಡುತ್ತಾರೆ. ಯೆಹೋವ ದೇವರೇ, ಇದನ್ನು ಜ್ಞಾಪಕಮಾಡಿಕೊಳ್ಳಿರಿ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.


ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು