ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.
ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.