Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:21 - ಕನ್ನಡ ಸಮಕಾಲಿಕ ಅನುವಾದ

21 ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:21
34 ತಿಳಿವುಗಳ ಹೋಲಿಕೆ  

ಧೀರಹೃದಯದವರು ಸುಲಿಗೆಯಾಗಿ, ಅಂತಿಮ ನಿದ್ರೆ ಹೊಂದಿದ್ದಾರೆ. ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗಳನ್ನೆತ್ತಲು ಶಕ್ತನಲ್ಲ.


ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.


ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.


ನಾನೇ ಯೆಹೋವ ದೇವರು, ಅದೇ ನನ್ನ ಹೆಸರು. ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತುತಿಯನ್ನು ಎರಕದ ವಿಗ್ರಹಗಳಿಗೂ ಕೊಡೆನು.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ, “ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು, ಇಸ್ರಾಯೇಲಿನ ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದ್ದನ್ನು ಕೇಳಿ,


ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?


ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?


ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.


ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ಆದರೆ ದೀನತೆಯೊಂದಿಗೆ ಜ್ಞಾನ ಬರುವುದು.


ಇಲ್ಲಿ ಆತನ ಶತ್ರುಗಳಿಗೆ ನಾಚಿಕೆಯ ವಸ್ತ್ರವನ್ನು ಹೊದಿಸುವೆನು; ಆದರೆ ಆತನ ತೆರೆಯ ಮೇಲೆ ಕಿರೀಟವು ಶೋಭಿಸುವುದು.”


ದೇವರು ಅಧಿಕಾರಿಗಳ ಗರ್ವವನ್ನು ಮುರಿಯುತ್ತಾರೆ. ಭೂಲೋಕದ ಅರಸರು ದೇವರಿಗೆ ಭಯಪಡುತ್ತಾರೆ.


ನೀವು ಭಯಭಕ್ತಿಗೆ ಪಾತ್ರರು, ನೀವು ಒಂದು ಸಾರಿ ಬೇಸರಗೊಂಡರೆ, ನಿಮ್ಮ ಮುಂದೆ ನಿಲ್ಲುವವನ್ಯಾರು?


ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ ದಾವೀದನಿಗೂ ಅವನ ಸಂತತಿಯವರಿಗೂ ಒಡಂಬಡಿಕೆಯ ಪ್ರೀತಿಯನ್ನು ಯುಗಯುಗಕ್ಕೂ ಅನುಗ್ರಹಿಸುವರು.


ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.


ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.


ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.


ಇದರ ನಿಮಿತ್ತ ಅರಸನಾದ ಹಿಜ್ಕೀಯನೂ, ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.


ಹೀಗೆ ಯೆಹೋವ ದೇವರು ಹಿಜ್ಕೀಯನನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ, ಅಸ್ಸೀರಿಯದ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ, ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ, ಸಮಸ್ತ ಕಡೆಯಿಂದ ಅವರನ್ನು ನಡೆಸಿದರು.


ನಿಂದಕನ ಮತ್ತು ದೂಷಕನ ಮಾತುಗಳಿಗೂ ಮುಯ್ಯಿಗೆ ಮುಯ್ಯಿ ತೀರಿಸುವ ಶತ್ರುವಿನ ನಿಮಿತ್ತವೂ,


ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.


ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.”


“ನಮಗೋಸ್ಕರ ಯೆಹೋವ ದೇವರನ್ನು ವಿಚಾರಿಸು. ಏಕೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ. ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟು ಹೋಗುವಹಾಗೆ ಯೆಹೋವ ದೇವರು ಹಿಂದಿನ ಕಾಲದಂತೆಯೇ ತಮ್ಮ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುವರು,” ಎಂದು ಅವರ ಮೂಲಕ ವಿಜ್ಞಾಪಿಸಿದಾಗ, ಯೆರೆಮೀಯನಿಗೆ ಯೆಹೋವ ದೇವರ ವಾಕ್ಯವು ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು