Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:22 - ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಯೆಹೋವ ದೇವರು ಹಿಜ್ಕೀಯನನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ, ಅಸ್ಸೀರಿಯದ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ, ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ, ಸಮಸ್ತ ಕಡೆಯಿಂದ ಅವರನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೀಗೆ ಸರ್ವೇಶ್ವರ, ಹಿಜ್ಕೀಯನನ್ನೂ ಜೆರುಸಲೇಮಿನವರನ್ನೂ ಅಸ್ಸೀರಿಯದ ಅರಸ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇವಿುನವರನ್ನೂ ಅಶ್ಶೂರದ ಅರಸನಾದ ಸನ್ಹೇರೀಬನ ಕೈಗೂ ಸುತ್ತಣ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈ ರೀತಿಯಾಗಿ ದೇವರಾದ ಯೆಹೋವನು ಜೆರುಸಲೇಮಿನ ಜನರನ್ನು ಅಶ್ಶೂರದ ಅರಸನಾದ ಸನ್ಹೇರೀಬನಿಂದಲೂ ಮತ್ತು ಇತರ ಎಲ್ಲಾ ಜನರಿಂದಲೂ ಪಾರುಮಾಡಿದನು; ಹಿಜ್ಕೀಯನನ್ನು ಮತ್ತು ಜೆರುಸಲೇಮಿನ ಜನರನ್ನೂ ಪರಿಪಾಲನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:22
16 ತಿಳಿವುಗಳ ಹೋಲಿಕೆ  

ಕರ್ತ ಯೇಸು ದೇವರ ಪ್ರೀತಿಯಲ್ಲಿಯೂ ತಮ್ಮ ತಾಳ್ಮೆಯಲ್ಲಿಯೂ ನಿಮ್ಮ ಹೃದಯಗಳನ್ನು ನಡೆಸಲಿ.


ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.


ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.


ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ.


ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ, ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ, ನಿನ್ನ ಎಲುಬುಗಳನ್ನು ಬಲಪಡಿಸುವರು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಇರುವೆ. ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ


ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ. ಯೆಹೋವ ದೇವರು ನಮಗೆ ಆಜ್ಞೆಕೊಡುವವರು. ಯೆಹೋವ ದೇವರೇ, ನಮ್ಮ ರಾಜ. ಯೆಹೋವ ದೇವರೇ ನಮ್ಮನ್ನು ರಕ್ಷಿಸುವವರು.


ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.


ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.


ಹೀಗೆ ಯೆಹೋವ ದೇವರು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದರು. ಆ ಯುದ್ಧವು ಬೇತಾವೆನಿನವರೆಗೂ ನಡೆಯಿತು.


ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.


ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು