Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:27 - ಕನ್ನಡ ಸಮಕಾಲಿಕ ಅನುವಾದ

27 ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹಿಜ್ಕೀಯನಿಗೆ ಅತ್ಯಧಿಕವಾದ ಧನಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕಾಗಿ ಭಂಡಾರಗಳನ್ನು ಏರ್ಪಡಿಸಿದನು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿ ಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧ ಇವುಗಳನ್ನಿಡುವದಕ್ಕೋಸ್ಕರ ಭಂಡಾರಗಳನ್ನೂ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳನ್ನು ಸಂಗ್ರಹಿಸುವದಕ್ಕೋಸ್ಕರ ಉಗ್ರಾಣಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹಿಜ್ಕೀಯನಿಗೆ ಬೇಕಾದಷ್ಟು ಧನೈಶ್ವರ್ಯಗಳಿದ್ದವು. ಅವನು ಬೆಳ್ಳಿಬಂಗಾರಗಳನ್ನೂ ಸುಗಂಧವಸ್ತುಗಳನ್ನೂ ಗುರಾಣಿಗಳನ್ನೂ ಬೆಲೆಬಾಳುವ ಆಭರಣಗಳನ್ನೂ ಇಡಲು ಸ್ಥಳವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:27
11 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.


ಆದ್ದರಿಂದ ಯೆಹೋವ ದೇವರು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದರು. ಯೆಹೂದವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟದ್ದರಿಂದ, ಅವನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಯಿತು.


ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.


ಜ್ಞಾನ ಮತ್ತು ತಿಳುವಳಿಕೆಯನ್ನು ನಿನಗೆ ಕೊಡುತ್ತೇನೆ. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸರಲ್ಲಿ ಯಾರಿಗೂ ಇಲ್ಲದಂಥ ಮತ್ತು ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ, ಆಸ್ತಿಯನ್ನೂ, ಘನವನ್ನೂ ಕೊಡುತ್ತೇನೆ,” ಎಂದರು.


ಹಿಜ್ಕೀಯನು ಅವರ ಮಾತು ಕೇಳಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ಅನಂತರ ಹಿಜ್ಕೀಯನೂ, ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯದಲ್ಲಿ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ, ಹಿಜ್ಕೀಯನ ದಿವಸಗಳಲ್ಲಿ ಯೆಹೋವ ದೇವರ ರೌದ್ರವು ಅವರ ಮೇಲೆ ಬರಲಿಲ್ಲ.


ಇದಲ್ಲದೆ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನೂ, ಸಕಲ ವಿಧವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ, ಕುರಿಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.


ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು.


ಯೆಹೋವ ದೇವರು ಬಡತನವನ್ನು, ಐಶ್ವರ್ಯವನ್ನು ಕೊಡುವವರೂ, ತಗ್ಗಿಸುವವರೂ, ಉನ್ನತ ಮಾಡುವವರೂ ಆಗಿದ್ದಾರೆ.


ಅವನು ದೀರ್ಘಾಯುಷ್ಯದಿಂದಲೂ, ಐಶ್ವರ್ಯದಿಂದಲೂ, ಘನದಿಂದಲೂ ಕೂಡಿದವನಾಗಿ, ಒಳ್ಳೆಯ ಪ್ರಾಯದಲ್ಲಿ ಮರಣಹೊಂದಿದನು. ಅವನ ಮಗ ಸೊಲೊಮೋನನು ಅವನಿಗೆ ಬದಲಾಗಿ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು